ಇಂಜಿನಿಯರಿಂಗ್ ವಿದ್ಯಾರ್ಥಿ ಶರತ್  ಸ್ಮರಣಾರ್ಥ ರಕ್ತದಾನ ಶಿಬಿರ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಫೆ.10): ರಸ್ತೆ ಅಪಘಾತದಲ್ಲಿ ಮೃತಪಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿ ಎಸ್.ಶರತ್‍ರವರ ಸ್ಮರಣಾರ್ಥವಾಗಿ ಅವರ ಜನ್ಮದಿನದಂದು ಶುಕ್ರವಾರ ಐ.ಎಂ.ಎ.ಹಾಲ್‍ನಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಜಾಸೇವಾ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ರೋಟರಿ ಕ್ಲಬ್ ಚಿನ್ಮುಲಾದ್ರಿ, ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.

ಈ ರಕ್ತದಾನ ಶಿಬಿರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್, ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷ ಈ.ಅರುಣ್‍ಕುಮಾರ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಕಾರ್ಯದರ್ಶಿ ಮಜಹರ್‍ವುಲ್ಲಾ, ನಾಗರೀಕ ಬಂದೂಕು ತರಬೇತಿ ಸಂಸ್ಥೆಯ ಮಹಮದ್ ಆಲಿ, ನರೇಂದ್ರರೆಡ್ಡಿ, ಎಸ್.ಜೆ.ಎಂ.ಚಿತ್ರಕಲಾ ಕಾಲೇಜಿನ ಪ್ರಾಂಶುಪಾಲರಾದ ಕಣ್ಮೇಶ್, ಸಮಾಜ ಕಲ್ಯಾಣ ಇಲಾಖೆಯ ಚನ್ನಬಸಪ್ಪ, ಅನುಸೂಯಮ್ಮ, ಹನುಮಂತೆಗೌಡ ಪೂಜಾರ್, ಭರತ್, ರೀನಾ ವೀರಭದ್ರಪ್ಪ, ಮೃತ ವಿದ್ಯಾರ್ಥಿಯ ಪೋಷಕರುಗಳಾದ ಶ್ರೀನಿವಾಸ್ ಮಳಲಿ, ಓಂಕಾರಮ್ಮ, ಜಾನಪದ ಹಾಡುಗಾರರಾದ ಹರೀಶ್, ಗಂಗಾಧರ್, ಹಿಮಂತ್‍ರಾಜ್ ಇವರುಗಳು ನುಡಿನಮನ ಗೀತೆಗಳನ್ನು ಹಾಡಿದರು. ಅಪಾರ ಸಂಖ್ಯೆಯ ಸ್ನೇಹಿತರು, ಹಿತೈಷಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಎಸ್.ಶರತ್ ಆತ್ಮಕ್ಕೆ ಚಿರಶಾಂತಿ ಕೋರಿದರು.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago