Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ : ಸಚಿವ ಡಿ ಸುಧಾಕರ್

---Advertisement---

ಸುದ್ದಿಒನ್, ಹಿರಿಯೂರು, ಏಪ್ರಿಲ್. 21 : ಕುಡಿಯುವ ನೀರಿನ ಸಮಸ್ಯೆ ವಿಚಾರದಲ್ಲಿ ಅಧಿಕಾರಿಗಳು ಉದಾಸಿನತೆ ತೊರಬಾರದು, ತಾಲ್ಲೂಕಿನ ಯಾವ ಹಳ್ಳಿಯಲ್ಲೂ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.

ನಗರದ ಹುಳಿಯಾರು ರಸ್ತೆಯಲ್ಲಿರುವ ತಾಲ್ಲೂಕು ಸಾಮರ್ಥ್ಯ ಸೌಧದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದುಡ್ಡಿನ ಬಗ್ಗೆ ಯೋಚಿಸಬಾರದು, ಟ್ಯಾಂಕರ್ ಮೂಲಕ ನೀರು ಕಲ್ಪಿಸಿ ಯಾವುದೇ ಕಾರಣಕ್ಕೂ ಎಲ್ಲೂ ಕುಡಿಯುವ ನೀರು ತೊಂದರೆ ಆಗಬಾರದು, ಬೇರೆ ಯಾವುದಾದರೂ ಮೂಲದಿಂದ ದುಡ್ಡು ವ್ಯವಸ್ಥೆ ಮಾಡೋಣ ಎಂದು ಸಚಿವರು ತಿಳಿಸಿದರು.

ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಮಾತನಾಡಿ
ತಾಲ್ಲೂಕಿನ ಮ್ಯಾದನಹೊಳೆ ಸೇತುವೆ ಕಾಮಗಾರಿ ಆರಂಭವಾಗಿದೆ. ಆಗಸ್ಟ್ ನಲ್ಲಿ ಕಾಮಗಾರಿ ಮುಗಿಯಲಿದೆ..
ಕಲ್ಲಹಟ್ಟಿ ಬಳಿ 50ಲಕ್ಷದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದ್ದು, ಮುಗಿಯುವ ಹಂತದಲ್ಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಖಾದಿ ರಮೇಶ್, ಕೃಷ್ಣಮೂರ್ತಿ, ಕೆಡಿಪಿ ಸದಸ್ಯರಾದ ಗುರುಪ್ರಸಾದ್, ಮಹಾಂತೇಶ್, ತಹಶೀಲ್ದಾರ್ ಸಿ ರಾಜೇಶ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ. ವೆಂಕಟೇಶ್, ಸಿಡಿಪಿಒ ರಾಘವೇಂದ್ರ, ಬಿಇಒ ಸಿಎಂ ತಿಪ್ಪೇಸ್ವಾಮಿ, ಬೆಸ್ಕಾಂ ಅಧಿಕಾರಿ ಪೀರ್ ಸಾಬ್, ಇದ್ದರು

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...