Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ಥಳೀಯ ಉತ್ಪನ್ನಗಳ ಬಳಕೆ ಮತ್ತು ಸರಳ ಜೀವನದಿಂದ ಪರಿಸರ ಸಂರಕ್ಷಣೆ ಸಾಧ್ಯ : ಡಾ. ಎಚ್.ಕೆ.ಎಸ್. ಸ್ವಾಮಿ

---Advertisement---

 

ಫೋಟೋ ಮತ್ತು ವರದಿ ಕೃಪೆ
ಅರ್ಜಿತ್ ಗೋವಿಂಧನ್
9741738979

ಸುದ್ದಿಒನ್, ಚಿತ್ರದುರ್ಗ : ಇಂಧನ ಉಳಿತಾಯ, ಸರಳ ಜೀವನ, ಸ್ಥಳೀಯ ಉತ್ಪನ್ನಗಳ ಬಳಕೆ, ಗಾಂಧೀಜಿಯವರ  ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವುದರ ಮುಖಾಂತರ ಪರಿಸರ ಸಂರಕ್ಷಣೆ ಸಾಧ್ಯವೆಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಡಾ, ಎಚ್. ಕೆ.ಎಸ್.ಸ್ವಾಮಿ  ತಿಳಿಸಿದರು.

ಅವರು ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ವತಿಯಿಂದ ಶುಕ್ರವಾರ  ಜ್ಞಾನವಿಕಾಸ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂನ ಭಾಗವಾಗಿ ಯುವಜನಾಂಗವನ್ನು ಪರಿಸರ ಸಂರಕ್ಷಣೆಗಾಗಿ ಜಾಗೃತಗೊಳಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸ್ಥಳೀಯ ಉತ್ಪನ್ನಗಳ ಬಳಕ ಹೆಚ್ಚಿಸಿ, ಜನರಲ್ಲಿ ದುಡಿಮೆಯ ಮಹತ್ವವನ್ನು ತಿಳಿಸಿ, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಪರಿಸರ ಸಂರಕ್ಷಣೆ ಮಾಡಿಕೊಳ್ಳವುದು ಸಹ ಒಂದು ವಿಧಾನ ಎಂದು ಚರಕದ ಪ್ರಾತ್ಯಕ್ಷಿಕೆಯ ಮುಖಾಂತರ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ  ಜಿ. ಸುರೇಶ್ ರವರು ಪರಿಸರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡದೆ ಅದನ್ನು ಸಂಗ್ರಹಿಸಿ, ವಿಂಗಡಿಸಿ ವಿಲೇವಾರಿ ಮಾಡಿ ಸೃಚ್ಛತೆಗೆ ಆಧ್ಯತೆ ನೀಡುತ್ತ ಪರಿಸರ ಸಂರಕ್ಷಣೆ ಮೂಲಕ ಜಾಗ್ರತಿ ಮೂಡಿಸಬೇಕೆಂದು ತಿಳಿಸಿದರು.

ಸಿವಿಲ್ ವಿಭಾಗದ ಮುಖ್ಯಸ್ಥ ಹರೀಶಯಾದವ್ ಎಸ್ ಜಿ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾಥಿ೯ಗಳು ಭಾಗವಹಿಸಿದ್ದರು..

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...