Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಸರ ಸಂರಕ್ಷಣೆ ಜಾಗೃತಿ ಎಲ್ಲರಲ್ಲೂ ಮೂಡಬೇಕು : ಸರ್ದಾರ್ ಸೇವಾಲಾಲ್ ಸ್ವಾಮೀಜಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.03) : ಸಮೃದ್ದ ಮಳೆ-ಬೆಳೆಯಾಗಿ ಪರಿಸರ ಹಚ್ಚ ಹಸಿರಿನಿಂದ ಕೂಡಿರಬೇಕಾದರೆ ಗಿಡ-ಮರಗಳನ್ನು ಬೆಳೆಸಬೇಕಿದೆ ಎಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಹೇಳಿದರು.

ಅರಣ್ಯ ಇಲಾಖೆ ಚಿತ್ರದುರ್ಗ ಪ್ರಾದೇಶಿಕ ಸಾಮಾಜಿಕ ವಲಯದಿಂದ ಜು.1 ರಿಂದ 7 ರವರೆಗೆ ಹಮ್ಮಿಕೊಂಡಿರುವ ವನ ಮಹೋತ್ಸವ ನಿಮಿತ್ತ ಸೀಬಾರದ ಸಮೀಪವಿರುವ ಬಂಜಾರ ಗುರುಪೀಠದ ಆವರಣದಲ್ಲಿ ಗುರು ಪೂರ್ಣಿಮ ದಿನದ ಸೋಮವಾರ ಸಸಿಗಳನ್ನು ನೆಟ್ಟು ಮಾತನಾಡಿದ ಸ್ವಾಮೀಜಿ ಮಾನವನ ದುರಾಸೆಯಿಂದ ಪರಿಸರ ನಾಶವಾಗುತ್ತಿದೆ. ಪರಿಸರ ಸಂರಕ್ಷಿಸುವುದು ಕೇವಲ ಅರಣ್ಯ ಇಲಾಖೆ ಕೆಲಸವಲ್ಲ. ಪ್ರತಿಯೊಬ್ಬರ ಜವಾಬ್ದಾರಿ ಎನ್ನುವ ಜಾಗೃತಿ ಎಲ್ಲರಲ್ಲೂ ಮೂಡಬೇಕಿದೆ ಎಂದು ತಿಳಿಸಿದರು.

ಶಿಕ್ಷಣ ಬೆಳೆದಂತೆಲ್ಲಾ ಪರಿಸರ ನಾಶವಾಗುತ್ತಿದೆ. ಹಿಂದಿನ ಕಾಲದಲ್ಲಿ ಹಿರಿಯರು ಗಿಡಗಳನ್ನು ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸುತ್ತಿದ್ದರು. ಕಾಲ-ಕಾಲಕ್ಕೆ ತಕ್ಕಂತೆ ಮಳೆಯಾಗಬೇಕಾದರೆ ಪರಿಸರ ಹಸಿರಿನಿಂದ ಕೂಡಿರಬೇಕು. ಆಗ ಮಾತ್ರ ಸಮೃದ್ದ ಬೆಳೆಯಾಗಿ ರೈತಾಪಿ ವರ್ಗ ಸೇರಿದಂತೆ ಸಕಲ ಜೀವರಾಶಿಗಳು ನೆಮ್ಮಿದಿಯಿಂದ ಬದುಕಲು ಸಾಧ್ಯ. ಇಷ್ಟೊತ್ತಿಗಾಗಲೆ ಸಾಕಷ್ಟು ಮಳೆಯಾಗಬೇಕಿತ್ತು. ಇನ್ನು ಬಾರದ ಕಾರಣ ದೇಶಕ್ಕೆ ಅನ್ನ ನೀಡುವ ರೈತ ಚಿಂತೆಗೊಳಗಾಗಿದ್ದಾನೆಂದು ವಿಷಾಧಿಸಿದರು.

ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ದುರ್ಗನಾಯ್ಕ ಮಾತನಾಡಿ ಪ್ರತಿ ವರ್ಷವು ಜೂ.5 ರಂದು ಪರಿಸರ ದಿನಾಚರಣೆಯನ್ನು ಆಚರಿಸಲಾಗುವುದು. ಅದರೆ ಅರಣ್ಯ ಇಲಾಖೆ ಏಳು ದಿನಗಳ ವನ ಮಹೋತ್ಸವ ಏರ್ಪಡಿಸಿರುವುದರಿಂದ ಇಲ್ಲಿ ಸಸಿಗಳನ್ನು ನೆಡಲಾಗುತ್ತಿದೆ. ಎಲ್ಲರೂ ಗಿಡ-ಮರಗಳನ್ನು ಬೆಳೆಸಿ ಪರಿಸರಕ್ಕೆ ಚಿಕ್ಕ ಕೊಡುಗೆಯನ್ನು ನೀಡಬೇಕೆಂದು ಮನವಿ ಮಾಡಿದರು.

ವಲಯ ಅರಣ್ಯಾಧಿಕಾರಿ ಉಷರಾಣಿ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಗೆ ನುಗ್ಗೆ ಹಾಗೂ ಕರಿಬೇವು ಗಿಡಗಳನ್ನು ವಿತರಿಸಿ ಮಾತನಾಡುತ್ತ ಗಿಡಗಳನ್ನು ನೆಟ್ಟು ಪೋಷಿಸುವ ಹೊಣೆಗಾರಿಕೆ ನಿಮ್ಮದು. ಇನ್ನು ಎರಡು ಮೂರು ವರ್ಷಗಳಲ್ಲಿ ದೊಡ್ಡದಾಗಿ ಬೆಳೆದಿರಬೇಕು ಎಂದು ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಿದರು.

ಚಿತ್ರಡಾನ್‍ಬೋಸ್ಕೊ ನಿರ್ದೇಶಕ ಸ್ಟೀವನ್ ಲಾರೆನ್ಸ್, ಇಂದಿರಾಗಾಂಧಿ ವಸತಿ ಶಾಲೆಯ ಶಿಕ್ಷಕ ವಿಶ್ವಾಸ್, ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರದೀಪ್ ಕೇಸರಿ, ಚೇತನ್‍ನಾಯ್ಕ, ಬೀಟ್ ಫಾರೆಸ್ಟರ್‍ಗಳು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹೊನ್ನೂರ್ ಅಲಿ ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!