Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಈಶ್ವರ ಖಂಡ್ರೆ ಅವರ ತಂದೆ ಭೀಮಣ್ಣ ಖಂಡ್ರೆ ನಿಧನ : ದುಃಖದಲ್ಲಿ ಕುಟುಂಬ ಹೇಳಿದ್ದೇನು..?

---Advertisement---

ಬೀದರ್: ಶಾತಯುಷಿ, ಸ್ವಾತಂತ್ರ್ಯ ಹೋರಾಟಗಾರ‌, ಮಾಜಿ ಸಚಿವ ಭೀಮಣ್ಣ ಖಂಡ್ರೆ ವಿಧಿವಶರಾಗಿದ್ದಾರೆ. ಬೀದರ್ ಜಿಲ್ಲೆಯ ಬಾಲ್ಕಿ ಪಟ್ಟಣದ ಸ್ವಗೃಹದಲ್ಲಿ ಲೋಕನಾಯಕ ಭೀಮಣ್ಣ ಖಂಡ್ರೆ ಕೊನೆಯುಸಿರೆಳೆದಿದ್ದಾರೆ. ತಮ್ಮ 103ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಈ ಬಗ್ಗೆ ಮಗ ಈಶ್ವರ ಖಂಡ್ರೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಭೀಮಣ್ಣ ಖಂಡ್ರೆ ಅವರು ನಿನ್ನೆ ರಾತ್ರಿ 10.50ಕ್ಕೆ ನಿಧನರಾಗಿದ್ದಾರೆ. ಸುಮಾರು 15 ದಿನದಿಂದ ಅವರು ಅನಾರೋಗ್ಯದಿಂದ ಬಳಲುತ್ತಾ ಇದ್ದರು. ಅವರನ್ನ ನಾಲ್ಕೈದು ದಿನದ ಕೆಳಗೆ ಮನೆಗೆ ಕರೆದುಕೊಂಡು ಬಂದಿದ್ದೆವು. ಮನೆಯಲ್ಲಿ ಚೇತರಿಸಿಕೊಂಡರು. ವಯೋಸಹಜ ಕಾಯಿಲೆಯಿಂದ ಅವರು ನಿಧನರಾಗಿದ್ದಾರೆ. ಇದು ಅತ್ಯಂತ ದುಃಖದ ಸಂಗತಿ. ಇವತ್ತು ಅವರು ಸಾರ್ಥಕವಾದ ಬದುಕನ್ನ ಬದುಕಿದ್ದಾರೆ. ನಮ್ಮೆಲ್ಲರಿಗೂ ಒಂದು ಆದರ್ಶದಾಯಕ ಬದುಕನ್ನ ಕೊಟ್ಟಿದ್ದಾರೆ. ಅವರು ಜನರಿಗಾಗಿ, ಈ ಭಾಗದ ಏಳ್ಗೆಗಾಗಿ ಹೋರಾಟ ಮಾಡಿದ್ದಾರೆ.

ರೈತರಿಗಾಗಿ ಹೋರಾಟ ಮಾಡಿದ್ದಾರೆ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವವರು, ರಾಜಕೀಯ ಅಂದ್ರೆ ಸಮಾಜ ಸೇವೆ ಎಂದುಕೊಂಡಿದ್ದವರು. 102 ವರ್ಷದಲ್ಲಿ, ಸುಮಾರು 92 ವರ್ಷಗಳವರೆಗೂ ಸಕ್ರಿಯವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದವರು. ಶಾಸಕರಾಗಿ, ಸಚಿವರಾಗಿ ಇವತ್ತು ಈ ಭಾಗದ ಏಳಿಗೆಗಾಗಿ ದುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿ ಕೆಲಸ ಮಾಡಿದ್ದಾರೆ. ಅವರ ಆದರ್ಶಗಳು, ತತ್ವ ಸಿದ್ಧಾಂತಗಳು ಯಾವತ್ತಿಗೂ ಪ್ರಸ್ತುತವಾಗಿದ್ದಾವೆ. ಸಮಾಜದಲ್ಲಿ ಸಾಮರಸ್ಯ ಇರಬೇಕು ಅಂತ ಸರ್ವ ಧರ್ಮ ಸಮನ್ವಯ ಅನ್ನುವಂತ ರೀತಿಯಲ್ಲಿ ಕರ್ನಾಟಕ ಶಾಂತಿಯ ತೋಟ ಎಂಬಂತೆ ಹೇಳುತ್ತಿದ್ದವರು. ಹಾಗಾಗಿಯೇ ಎಲ್ಲಾ‌ ಸಮುದಾಯದವರನ್ನು ಜೊತೆಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದವರು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...