ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕೋಲಾರ: ಹೊಸ ಸರ್ಕಾರಗಳು ಬಂದಾಗ ವಿರೋಧ ಪಕ್ಷದವರು ಕೆಲವೊಂದು ಆರೋಪಗಳನ್ನು ಮಾಡುತ್ತಾರೆ. ಕಳೆದ ಬಾರಿ ಬಿಜೆಪಿ ಸರ್ಕಾರವಿದ್ದಾಗ ಕಾಂಗ್ರೆಸ್ ನವರು ಕಮಿಷನ್ ಆರೋಪದ ವಿಚಾರಕ್ಕೆ ಪ್ರತಿಭಟನೆ ಮಾಡಿದ್ದರು. ಇದೀಗ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬಿಜೆಪಿ ನಾಯಕರು ವರ್ಗಾವಣೆ ದಂಧೆಯ ಆರೋಪ ಮಾಡಿದ್ದಾರೆ.
ಇದೇ ವಿಚಾರಕ್ಕೆ ಮಾಜಿ ಸಚಿವ ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರನ್ನು ದೇವರ ಸನ್ನಿಧಿಗೆ ಕರೆದಿದ್ದಾರೆ. ನೀವೂ, ನಿಮ್ಮ ಮಗ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿಲ್ಲ ಎಂದು ಗಣಪತಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ. ಈ ಹಿಂದೆ ಬಿಜೆಪಿ ಪಕ್ಷದ ಮೇಲೆ ಆರೋಪ ಮಾಡಿದ್ದವರು. ಆದರೆ ಈಗಿನ ಸರ್ಕಾರ ದಂಧೆಯಲ್ಲಿ ತೊಡಗಿದೆ. ಬೇಕಾದರೆ ಹಾಲಿ ಅಥವಾ ನಿವೃತ್ತ ಜಡ್ಜ್ ನೇಮಿಸಿ ತನಿಖೆ ನಡೆಸಲಿ ಎಂದಿದ್ದಾರೆ.
ಗಣಪತಿ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಲಿ. ಅದು ಸುಳ್ಳು ಎಂದಾದರೇ ಕುರುಡುಮಲೆ ಗಣಪತಿ ನನಗೆ ಏನು ಬೇಕಾದರೂ ಶಾಪ ನೀಡಲಿ. ಈಗಾಗಲೇ ವರ್ಗಾವಣೆ ದಂಧೆ ಶುರುವಾಗಿದೆ. ಎಲ್ಲಾ ವರ್ಗಾವಣೆಗಳು ಸಿದ್ದರಾಮಯ್ಯ ಅವರ ಗಮನಕ್ಕೆ ಬರಬೇಕಂತೆ. ಈ ರೀತಿ ಆದೇಶಿಸಿದ್ದಾರೆ. ವರ್ಗಾವಣೆ ದಂಧೆ ಸುಳ್ಳು ಆದರೆ ಗಣಪತಿ ದೇವಸ್ಥಾನಕ್ಕೆ ಬಂದು ಸಿದ್ದರಾಮಯ್ಯ ಅವರು ಪ್ರಮಾಣ ಮಾಡಲಿ ಎಂದು ಹೇಳಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್