Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದಲ್ಲಿ ಈಶ್ವರಪ್ಪ ಸಮಾವೇಶ : ಹರಿದು ಬಂತು ಜನಸಾಗರ..!

---Advertisement---

ಶಿವಮೊಗ್ಗ: ಬಿಜೆಪಿ ನಾಯಕರಿಗೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವುದಕ್ಕೆ ಕೆ ಎಸ್ ಈಶ್ವರಪ್ಪ ಎಲ್ಲಾ ರೀತಿಯ ತಯಾರಿಯನ್ನು ಮಾಡಿದ್ದಾರೆ. ಅದರ ಸಲುವಾಗಿಯೇ ಪ್ರಚಾರ ಕಾರ್ಯವನ್ನು ಶುರು ಮಾಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದು, ಬೂತ್ ಮಟ್ಟದಲ್ಲಿ ದೊಡ್ಡ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಈಶ್ವರಪ್ಪ ಕಾರ್ಯಕ್ರಮಕ್ಕೆ ಜನ ಸಾಗರವೇ ಹರಿದು ಬಂದಿದೆ.

 

ಶಿವಮೊಗ್ಗದಲ್ಲಿ ಮಾತನಾಡಿದ ಕೆ ಎಸ್ ಈಶ್ವರಪ್ಪ, ನಾನು ಯಾರಿಗೂ ಅನ್ಯಾಯ ಮಾಡಿಲ್ಲ. ಧರ್ಮದ ಪರವಾಗಿಯೇ ಚುನಾವಣೆ ಗೆಲ್ಲುತ್ತೇನೆ. ನಿಮ್ಮ ಒಬ್ಬ ಮಗ ಎಂಪಿ, ಒಬ್ಬ ಮಗ ಎಂಎಲ್ಎ ಅವನೇ ರಾಜ್ಯಾಧ್ಯಕ್ಷ. ಇವರೇ ಬೆಳೆಯಬೇಕು.‌ ಅಪ್ಪಿ ತಪ್ಪಿ ಬಿಜೆಪಿ, ಕಮಲಕ್ಕೆ ಮತ ಹಾಕಿಬಿಟ್ಟಿರಾ. ಚಿಹ್ನೆ ಯಾವುದು ಎಂದು ಏಪ್ರಿಲ್ 19ಕ್ಕೆ ತಿಳಿಯಲಿದೆ ಎಂದು ತಮಗೆ ಮತ ಹಾಕಬೇಕೆಂದು ಜನರಿಗೆ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಯಾರು ಲಿಂಗಾಯತರು ಇಲ್ವಾ..? ಎಲ್ಲಾ ಲಿಂಗಾಯತರು ಹೇಳುತ್ತಿದ್ದಾರೆ ನನಗೆ ಮತ ಹಾಕುತ್ತಾರಂತೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ವೀಕ್ ಅಭ್ಯರ್ಥಿಯನ್ನು ಹಾಕಿದ್ದಾರೆ. ನಾಲ್ಕು ಪಟ್ಟು ಹಣ ಖರ್ಚು ಮಾಡಿದರು ವಿಜಯೇಂದ್ರ ಗೆದ್ದಿದ್ದು ಬರೀ ಹತ್ತು ಸಾವಿರದ ಅಂತರದಿಂದ. ಆದರೆ ಈ ಬಾರಿ ಅಪ್ಪ ಮಕ್ಕಳನ್ನು ಸೋಲಿಸುವುದೇ ನನ್ನ ಗುರಿ. ಅಧರ್ಮ ನಾಶವಾಗುತ್ತೆ. ಧರ್ಮದ ಈಶ್ವರಪ್ಪ ಗೆಲ್ಲುತ್ತಾರೆ. ಯಡಿಯೂರಪ್ಪ ಮಕ್ಕಳು ಏನು ಆಟ ಆಡುತ್ತಾರೋ ಆಡಲಿ. ಚುನಾವಣೆಗೆ ಇನ್ನು ಒಂದು ತಿಂಗಳು ಸಮಯವಿದೆ. ಇವತ್ತೆ ಚುನಾವಣೆ ನಡೆದರು ಕೂಡ ಒಂದು ಲಕ್ಷ ಮತದಿಂದ ಗೆಲ್ಲುತ್ತೇನೆ. ಇನ್ನು ಮುಂದೆ ಪ್ರತಿಯೊಂದು ಮನೆಗೂ ಹೋಗಿ ಮತ ಕೇಳುತ್ತೇನೆ. ಜೆಡಿಎಸ್ ನಾಯಕರು ಸಹ ಜೊತೆಗೆ ಬರ್ತಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment