Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ಈಶ್ವರಪ್ಪ..!

---Advertisement---

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ತನ್ನ ಮಗನಿಗೆ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆಯುವುದಕ್ಕೆ ಕಡೆಯ ದಿನಾಂಕವಾಗಿತ್ತು. ಆದರೂ ಈಶ್ವರಪ್ಪ ಅವರು ನಾಮಪತ್ರ ವಾಪಸ್ ತೆಗೆದುಕೊಂಡಿಲ್ಲ. ಹೀಗಾಗಿ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಈಶ್ವರಪ್ಪ ಅವರು ಬಂಡಾಯವೆದ್ದ ದಿನದಿಂದಾನೂ ಬಿಜೆಪಿ ನಾಯಕರು ಬಂಡಾಯ ಶಮನ ಮಾಡುವ ಪ್ರಯತ್ನ ಮಾಡಿದರು. ಅಮಿತ್ ಶಾ ಅವರು ಕಿಉಡ ದೆಹಲಿಗೆ ಬರುವುದಕ್ಕೆ ಹೇಳಿದ್ದರು. ಆದರೆ ಭೇಟಿ ಮಾಡದೆ ಇದ್ದ ಕಾರಣ, ಇನ್ನಷ್ಟು ಕೋಪಗೊಂಡ ಈಶ್ವರಪ್ಪ, ದೆಹಲಿಯಿಂದಾನೇ ಸ್ಪರ್ಧೆ ಘೋಷಿಸಿದ್ದರು. ಇದೀಗ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಲು ಯಡಿಯೂರಪ್ಪ ಅವರ ವರದಿಯೇ ಕಾರಣ ಎಂದು ತಿಳಿದಿರುವ ಈಶ್ವರಪ್ಪ, ಯಡಿಯೂರಪ್ಪ ಪುತ್ರನ ವಿರುದ್ಧವೇ ಸ್ಪರ್ಧೆಗೆ ನಿಂತಿದ್ದಾರೆ. ಪ್ರಚಾರದ ವೇಳೆ, ಸುದ್ದಿಗೋಷ್ಟಿ ವೇಳೆ ಯಡಿಯೂರಪ್ಪ ಹಾಗೂ ಪುತ್ರರನ್ನು ನಿಂದಿಸುತ್ತಲೇ ಇರುತ್ತಾರೆ.

ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಇಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿಲ್ಲ. ಇದರಿಂದ ಬಿಜೆಪಿ ಪಕ್ಷದ ಶಿಸ್ತು ಉಲ್ಲಂಘನೆ ಆಗಿದೆ. ಹೀಗಾಗಿ ಪಕ್ಷದ ಶಿಸ್ತು ಸಮಿತಿಯಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಶಿವಮೊಗ್ಗ ಲೋಕಸಭಾ ಚುನಾವಣೆ ಎರಡನೇ ಹಂತದಲ್ಲಿ ನಡೆಯಲಿದ್ದು, ಮೇ 7 ರಂದು ನಡೆಯಲಿದೆ. ಸದ್ಯ ಬಿಜೆಪಿಯಿಂದ ಬಿವೈ ರಾಘವೇಂದ್ರ, ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಇದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment