Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಲ್ಲಂಗಡಿ ಒಡೆದಿದ್ದಕ್ಕೆ ಬೊಬ್ಬೆ ಹಾಕುವವರು ಈಗ ಯಾಕೆ ಮಾತಾಡ್ತಿಲ್ಲ..?: ಮಾಜಿ ಸಚಿವ ಈಶ್ವರಪ್ಪ

Facebook
Twitter
Telegram
WhatsApp

 

ಶಿವಮೊಗ್ಗ: ಎಲ್ಲೋ ಒಂದು ಕಲ್ಲಂಗಡಿ ಒಡೆದೋಯ್ತು ಅನ್ನೋದಕ್ಕೆ ಇಷ್ಟೊಂದು ಬೊಬ್ಬೆ ಹಾಕಿದಂತ ಕಾಂಗ್ರೆಸ್ ನ ಡಿ ಕೆ ಶಿವಕುಮಾರ್ ಅವರು, ಸಿದ್ದರಾಮಯ್ಯ ನವರು, ಕುಮಾರಸ್ವಾಮಿ ಯವರು ಕಲ್ಲಂಗಡಿ ಒಡೆದಿದ್ದಕ್ಕೆ ಬೊಬ್ಬೆ ಹಾಕ್ತಾರೆ. ಪೊಲೀಸ್ ಅಧಿಕಾರಿಯ ತಲೆ ಹೊಡೆದಿದ್ದಕ್ಕೆ ಬೊಬ್ಬೆ ಹಾಕಲ್ಲ. ಕೇವಲ ರಾಜಕಾರಣವೇ ಇವರ ಉದ್ದೇಶ. ಮುಸಲ್ಮಾನರ ಸಂತೃಪ್ತಿ ಪಡೆದುಕೊಂಡು. ಅದರ ಮುಖಾಂತರ ಮತ್ತೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕು ಎಂಬ ಕನಸನ್ನು ಕಾಣುತ್ತಾ ಇದ್ದಾರೆ.

ಕರ್ನಾಟಕ ರಾಜ್ಯದ ಜನತೆಗೆ ಗೊತ್ತು. ಇಡೀ ಹಿಂದೂ ಸಮಾಜ ಇದನ್ನು ಗಮನಿಸುತ್ತಾ ಇದೆ. ಮುಸಲ್ಮಾನರಲ್ಲಿರುವ ರಾಷ್ಟ್ರ ಭಕ್ತರು ಸಹ ಇದನ್ನು ಗಮನಿಸುತ್ತಾ ಇದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನವರದ್ದು ಅಧಿಕಾರದ ದಾಹ ಇದೆ. ಇದಕ್ಕೋಸ್ಕರ ಕೊಲೆಗಳು ಆಗ್ತಾ ಇವೆ, ಜೀವಗಳು ಹೋಗ್ತಾ ಇವೆ, ದೊಂಬಿಗಳು ನಡೆಯುತ್ತಾ ಇವೆ. ಇದೆಲ್ಲ ನಿಲ್ಲಬೇಕು ಅಂದ್ರೆ ಗೃಹಮಂತ್ರಿಗಳು, ಮುಖ್ಯಮಂತ್ರಿಗಳಿಗೆ ಈ ಕಡೆ ಗಮನ ಹರಿಸಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಈ ರೀತಿ ದೊಂಬಿ‌ ಮಾಡಬೇಕು ಎಂದು ತೀರ್ಮಾನ ಮಾಡಿ ಇಡೀ ಹುಬ್ಬಳ್ಳಿಯನ್ನು ಅಶಾಂತಿ‌ ಮಾಡಿದ್ದಾರೆ. RSS ಮುರ್ದಾಬಾದ್ ಘೋಷಣೆಗಳನ್ನು ಕೂಗಿಸಿದ್ದಾರೆ. ಅಲ್ಲಾ ಹು ಅಕ್ಬರ್ ಅಂತ ಕೂಗುತ್ತಾರೆ. ಈ ರೀತಿಯ ಕಲ್ಲು ತೂರಾಟ ಮಾಡಿರುವ ಪುಂಡರಿಗೆ ನೇರವಾಗಿ ಎದುರಿಸುವಂತ ಶಕ್ತಿ ಹಿಂದು ಸಂಘಟನೆಗಳಿಗಿದೆ. ಆದ್ರೆ ಕಾನೂನನ್ನು ಕೈಗೆ ತೆಗೆದುಕೊಳ್ಳಲು ತಯಾರಿಲ್ಲ. ಮೌಲ್ವಿ ಹೇಡಿಯಂತೆ ಓಡಿ ಹೋಗಿದ್ದಾನೆ. ಅಮಿತ್ ಶಾ ಅವರನ್ನು ಪ್ರಧಾನಿ ಮೋದಿಯವರನ್ನು ಮನವಿ ಮಾಡುತ್ತೇನೆ. ಈ ರೀತಿ ಗೂಂಡಾಗಿರಿ ಮಾಡಿಸಿ ಓಡಿ ಹೋಗಿರುವಂತ ಆ ರಾಷ್ಟ್ರ ದ್ರೋಹಿಯನ್ನು ಎಲ್ಲಿದ್ದರು ಬಂಧಿಸಬೇಕೆಂದು ಒತ್ತಾಯ ಮಾಡುತ್ತಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ :  ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು

  ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್‍ ಅನ್ನು  ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ  ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್

error: Content is protected !!