Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೆಹಲಿಗೆ ಕರೆದು ಸಿಗದ ಅಮಿತ್ ಶಾ : ಬ್ರಹ್ಮ ಬಂದು ಹೇಳಿದರು ಹಿಂದೆ ಸರಿಯಲ್ಲ ಎಂದ ಈಶ್ವರಪ್ಪ..!

---Advertisement---

 

ನವದೆಹಲಿ: ಮಗನಿಗೆ ಟಿಕೆಟ್ ಸಿಗದೆ ಬಂಡಾಯವೆದ್ದಿದ್ದ ಈಶ್ವರಪ್ಪ, ಸ್ವತಂತ್ರ್ಯವಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದರು. ಆದರೆ ಈ ಸಂಬಂಧ ಬಂಡಾಯ ಶಮನ ಮಾಡುವುದಕ್ಕೆಂದೆ ಅಮಿತ್ ಶಾ ಕರೆ ಮಾಡಿದ್ದರು. ದೆಹಲಿಗೆ ಬರುವಂತೆ ಸೂಚನೆ ನೀಡಿದ್ದರು. ಅವರ ಕರೆಗೆ ಹೂಗೊಟ್ಟು ಇಂದು ಈಶ್ವರಪ್ಪ ಇಂದು ದೆಹಲಿಗೆ ಹೋಗಿದ್ದಾರೆ. ಆದರೆ ಅಲ್ಲಿಯೂ ಅಮಿತ್ ಶಾ ಸಿಕ್ಕಿಲ್ಲ.

 

ಈ ಸಂಬಂಧ ಮಾತನಾಡಿರುವ ಈಶ್ವರಪ್ಪ, ಕೇಂದ್ರ ಗೃಹ ಸಚುವರು ಭೇಟಿಗೆ ಸಿಕ್ಕಿಲ್ಲ. ಗೃಹ ಸಚಿವರು ನನಗೆ ಕರೆ ಮಾಡಿ ಮಾತನಾಡಿದ್ದರು. ಬುಧವಾರ ದೆಹಲಿಗೆ ಬನ್ನಿ ಎಂದಿದ್ದರು. ಅದಕ್ಕಾಗಿ ನಾನು ದೆಹಲಿಗೆ ಬಂದೆ. ಆದರೆ ದೆಹಲಿಗೆ ಬಂದ ಬಳಿಕ ಅಮಿತ್ ಶಾ ಕಚೇರಿಯಿಂದ ಫೋನ್ ಬಂತು. ಅಮಿತ್ ಶಾ ಅವರು ಸದ್ಯಕ್ಕೆ ಸಿಗುವುದಿಲ್ಲ ಎಂದರು‌. ಇದರ ಅರ್ಥ ನಾನು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬುದಾಗಿದೆ. ಬಿವೈ ರಾಘವೇಂದ್ರ ಸೋಲಬೇಕು ಎಂಬುದೇ ಇದರ ಅರ್ಥವಾಗಿದೆ.

ನರೇಂದ್ರ ಮೋದಿ, ಅಮಿತ್ ಶಾ ಅಲ್ಲ ಬ್ರಹ್ಮ ಬಂದು ಹೇಳಿದರು ನಾನು ಹಿಂದೆ ಬರುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಅವರು ನನ್ನನ್ನು ಭೇಟಿಯಾವಿದ್ದರು ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೆ. ಬಿಜೆಪಿಯ ನಿಯಮಗಳಿಗೆ ಅನುಗುಣವಾಗಿ ನಡೆದುಕೊಂಡು ಬಂದಿದ್ದೇನೆ. ನಾನು ಶಾಸಕನಾಗಿ ನನ್ನ ಮಗನಿಗೆ ಟಿಕೆಟ್ ಕೇಳಿಲ್ಲ. ಯಡಿಯೂರಪ್ಪ ಅವರ ಕುಟುಂಬಕ್ಕೆ ಒಂದು ನೀತಿ, ನಮ್ಮ ಕುಟುಂಬಕ್ಕೆ ಮತ್ತೊಂದು ನೀತಿಯ..? ಅವರ ಮನೆಯಲ್ಲಿ ಒಬ್ಬ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ಕೂಡ ಆಗಿದ್ದಾರೆ ಎಂದು ಈಶ್ವರಪ್ಪ, ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...