Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ಸಂಘಟನೆ ಕಟ್ಟಲು ಈಶ್ವರಪ್ಪ ನಿರ್ಧಾರ : ಎಲ್ಲಿ, ಯಾವಾಗ, ಅಧಿಕೃತವಾಗಿ ಘೋಷಿಸುತ್ತಾರೆ ಗೊತ್ತಾ..?

Facebook
Twitter
Telegram
WhatsApp

 

ಹುಬ್ಬಳ್ಳಿ: ಕೆ.ಎಸ್ ಈಶ್ವರಪ್ಪ ಅವರು ಬಿಜೆಪಿ ಪಕ್ಷದಿಂದ ಹೊರ ಬಂದು ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸ್ವತಂತ್ರವಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಬಳಿಕ ಹಲವು ಬೆಳವಣಿಗೆಯ ನಂತರ ಮತ್ತೆ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ಮಾತಿತ್ತು. ಇದೀಗ ಹೊಸದಾಗಿ ಸಂಘಟನೆ ಕಟ್ಟುವ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಈಶ್ವರಪ್ಪ ಅವರೇ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಂದುಳಿದವರಿಗೆ ನ್ಯಾಯ ಕೊಡಲು ಒಂದು ಸಂಘಟನೆ ಬೇಕಾಗಿದೆ. ಹೀಗಾಗಿ ಸಾಧು-ಸಂತರ ಸೂಚನೆಯಂತೆ ಒಂದು ಸಂಘಟನೆ ಕಟ್ಟಲು ತೀರ್ಮಾನ ಮಾಡಿದ್ದೇವೆ. ಈ ಸಂಘಟನೆಗೆ ಸಾಧು-ಸಂತರು ಬೆಂಬಲ ಕೊಡುತ್ತೇವೆ ಎಂದಿದ್ದಾರೆ. ಸಂಘಟನೆ ರಚನೆಯ ಅಂತಿಮ ನಿರ್ಣಯವನ್ನು ಬಾಗಲಕೋಟೆಯಲ್ಲಿ ಕೈಗೊಳ್ಳುತ್ತೇವೆ. ಹುಬ್ಬಳ್ಳಿಯಲ್ಲಿ ಎಲ್ಲಾ ಜಾತಿಯವರನ್ನು ಸೇರಿಸಿ, ಮೊದಲ ಸಭೆ ಮಾಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷದವರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅನೇಕ ಸಲಹೆಗಳು ಬಂದಿವೆ. ಸಾಧು-ಸಂತರು ಕೂಡ ಸಲಹೆಯನ್ನು ನೀಡಿದ್ದಾರೆ. ಅವರ ಸಲಹೆಗೆ ನಾವೂ ಒಪ್ಪಿದ್ದೇವೆ.

ಅಕ್ಟೋಬರ್ 20ರಂದು ಬಾಗಲಕೋಟೆ ಚರಂತಿ ಮಠದ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 30-40 ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ. ಬಾಗಲಕೋಟೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಸಮಾಜದಲ್ಲಿ ಎಲ್ಲರಿಗೂ ಅನ್ಯಾಯವಾಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಲು ಈ ಸಂಘಟನೆ ಕಟ್ಟುತ್ತಿದ್ದೇವೆ. ರಾಣಿ ಚೆನ್ನಮ್ಮ ಬ್ರಿಗೇಡ್ ಮಾಡಲು ಸಲಹೆ ಬಂದಿದೆ. ನಮ್ಮ ಸಂಘಟನೆ ಅಲ್ಪಸಂಖ್ಯಾತರ ವಿರುದ್ಧ ಅಲ್ಲ ಆದರೆ ರಾಷ್ಟ್ರದ್ರೋಹಿ ಮುಸ್ಲಿಂರ ವಿರುದ್ಧವಾಗಿರುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

error: Content is protected !!