ಸಚಿವ ಸ್ಥಾನ ಉಳಿಸಿಕೊಳ್ಳುವ ಹಠ ಈಶ್ವರಪ್ಪರದ್ದು.. ಶಿಕ್ಷೆ ಆಗಲೇಬೇಕೆಂಬ ಪಟ್ಟು ಕಾಂಗ್ರೆಸ್ ನಾಯಕರದ್ದು : ಏನಾಗ್ತಿದೆ ಸಂತೋಷ್ ಕೇಸ್..!

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ನಾಯಕರ ಸ್ಟ್ರಾಂಗ್ ಅಸ್ತ್ರವೇ ಸಿಕ್ಕಿದೆ. ಗುತ್ತುಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡು ಸಚಿವ ಈಶ್ವರಪ್ಪ ಅವರನ್ನು ಗುರಿ ಮಾಡಿ ಹೋಗಿದ್ದಾರೆ. ಇತ್ತ ಈಶ್ವರಪ್ಪ ಎಫ್ಐಅರ್ ದಾಖಲಾದರೂ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ಬಿಟ್ಟುಕೊಡಲ್ಲ ಎಂಬ ಪಟ್ಟು ಹಿಡಿದಿದ್ದರೆ, ಅತ್ತ ಕಾಂಗ್ರೆಸ್ ಕಲಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರೆ ಉತ್ತಮ, ಇಲ್ಲ ಹೋರಾಟ‌ ಮಾಡಿ ರಾಜೀನಾಮೆ ನೀಡುವಂತೆ ಮಾಡಲು ಪಟ್ಟು ಹಿಡಿದಿದ್ದಾರೆ.

ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಈಗಾಗಲೇ ಈ ಸಂಬಂಧ ರಾಜ್ಯಪಾಲರಿಗೂ ದೂರು ನೀಡಿದ್ದಾರೆ. ರಾಜೀನಾಮೆ ಕೊಡಲ್ಲ ಎಂಬ ಈಶ್ವರಪ್ಪ ಹಟಡ ಹೆಚ್ಚಾದಷ್ಟು ಕಾಂಗ್ರೆಸ್ ನಾಯಕರ ಹೋರಾಟ ತೀವ್ರತೆ ಪಡೆದುಕೊಳ್ಳುತ್ತಿದೆ. ಇನ್ನು ಒಂದು ಹೆಜ್ಜೆ ಮುಂದಕ್ಕೆ ತೀರ್ಮಾನ ಮಾಡಿರುವ ಕೈ ನಾಯಕರು ಜನತಾ ನ್ಯಾಯಾಲಯಕ್ಕೂ ಈ ವಿಚಾರ ಕೊಡಂಒಯ್ಯುವ ನಿರ್ಧಾರ ಮಾಡಿದ್ದಾರೆ.

ರಾಜ್ಯಾದ್ಯಂತ ಪ್ರತಿಭಟನೆ ಹೆಚ್ಚಿಸಲು ಎಂಟು ದಿಕ್ಕುಗಳಲ್ಲೂ ಎಲ್ಲಾ ತಯಾರಿ ನಡೆಸಿಕೊಂಡಿದ್ದಾರೆ. ಸಂತೋಷ್ ಆತ್ಮಹತ್ಯೆ ಕೈ ನಾಯಕರಿಗೆ ಅಸ್ತ್ರವಾಗಿದೆ. ಇನ್ನು ಈಗಾಗಲೇ ಕಾಂಗ್ರೆಸ್ ನಾಯಕರು ಸಂತೋಷ್ ಮನೆಗೆ ಭೇಟಿ ನೀಡಿ, ಪತ್ನಿಗೆ ಸಾಂತ್ವನ ಹೇಳಿ ಬಂದಿದ್ದಾರೆ. ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಂತೋಷ್ ಮನೆಗೆ ಭೇಟಿ ನೀಡಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago