Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಿ : ಮುಖ್ಯಮಂತ್ರಿಗಳಿಗೆ ಶ್ರೀಮತಿ ಆರ್.ರಜನಿ ಲೇಪಾಕ್ಷ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.29 :ನಾಳೆ ಕನಕ ಜಯಂತಿ ಪ್ರಯುಕ್ತ ಅಥವಾ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ

ರಾಜ್ಯದಲ್ಲಿ ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷೆ ಶ್ರೀಮತಿ ಆರ್.ರಜನಿ ಲೇಪಾಕ್ಷ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಸುಮಾರು 80 ಲಕ್ಷಕ್ಕೂ ಹೆಚ್ಚು ಕುರುಬ ಸಮಾಜದ ಜನರು ವಾಸಿಸುತ್ತಿದ್ದು, ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಸಾಕಷ್ಟು ಹಿಂದೆ ಇದ್ದು, ರಾಜ್ಯದ ಕಟ್ಟ ಕಡೆಯ ಕುರುಬ ಸಮಾಜದ ಅಭಿವೃದ್ಧಿಗೆ ಕುರುಬರ ಅಭಿವೃದ್ಧಿ ಮಂಡಳಿಯ ಅವಶ್ಯಕತೆ ಇರುತ್ತದೆ.ಈಗಾಗಲೇ ರಾಜ್ಯದಲ್ಲಿ ಬ್ರಾಹ್ಮಣ, ಒಕ್ಕಲಿಗ, ಲಿಂಗಾಯತ, ಉಪ್ಪಾರ, ಈಡಿಗ,ಭೋವಿ,ಗೊಲ್ಲ ಸಮಾಜ,ವಾಲ್ಮೀಕಿ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಂಜಾರ ಅಭಿವೃದ್ಧಿ ನಿಗಮ,ಹೀಗೆ ರಾಜ್ಯದ ಎಲ್ಲಾ ಜಾತಿ ಜನಾಂಗಕ್ಕೆ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ಸರ್ವ ಜನಾಂಗದ ಅಭಿವೃದ್ದಿಗೆ ಹಿಂದಿನ ಮತ್ತು ಇಂದಿನ ಸರ್ಕಾರಗಳು ಶ್ರಮಿಸುತ್ತಿವೆ.

ಪ್ರಸ್ತುತ ಬಾಕಿ ಉಳಿದಿರುವ ಅಭಿವೃದ್ಧಿ ನಿಗಮ ಏಕೈಕ ಕುರುಬ ಸಮಾಜ ಅಭಿವೃದ್ಧಿ ನಿಗಮ. ಆದ್ದರಿಂದ ಕುರುಬರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ಎಂಬಂತೆ ನಿಗಮ ಸ್ಥಾಪನೆ  ತಮ್ಮ ಅವಧಿಯಲ್ಲಿ ಮಾಡುವ ಮೂಲಕ ಕುರುಬ ಸಮಾಜದ ಅಭಿವೃದ್ಧಿಗೆ ಮತ್ತಷ್ಟು ಬಲ ತುಂಬಬೇಕೆಂದು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...