Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

---Advertisement---

ಚಿತ್ರದುರ್ಗ. ಡಿ.17: ಸರ್ಕಾರದ ಆದೇಶದಂತೆ 2025-26ನೇ ಸಾಲಿನ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಪೌಲ್ಟ್ರಿ ಫೀಡ್ ಸಂಸ್ಥೆಗಳ ಬೇಡಿಕೆಯ ಪ್ರಕಾರ ಚಿತ್ರದುರ್ಗ ಜಿಲ್ಲೆಯಲ್ಲಿ 750 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಕೇಂದ್ರಗಳನ್ನು ತೆರೆಯಲು ಕ್ರಮಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಸೂಚಿಸಿದಂತೆ, ಪಿಎಸಿಎಸ್ ಐಮಂಗಲ ಸಹಕಾರ ಸಂಘದಿಂದ 250 ಮೆಟ್ರಿಕ್ ಟನ್, ಟಿಎಪಿಸಿಎಂಎಸ್ ಹಿರಿಯೂರು ಸಹಕಾರ ಸಂಘದಿಂದ 250 ಮೆಟ್ರಿಕ್ ಟನ್ ಹಾಗೂ ಪಿಎಸಿಎಸ್ ಮಾಡನಾಯಕನಹಳ್ಳಿ ಸಹಕಾರ ಸಂಘದಿಂದ 250 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದಾರೆ.

ಪ್ರತಿ ಎಕರೆಗೆ 12 ಕ್ವಿಂಟಾಲ್‍ನಂತೆ ಗರಿಷ್ಟ 50 ಕ್ವಿಂಟಾಲ್ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‍ಗೆ ರೂ.2400/-ಗಳಂತೆ ಸರ್ಕಾರದ ನಿಯಮಾಳಿಗಳನ್ವಯ ಖರೀದಿಸಲು ಖರೀದಿ ಸಂಸ್ಥೆಯಾದ “ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಚಿತ್ರದುರ್ಗ ಅವರಿಗೆ ಸೂಚಿಸಿದ್ದಾರೆ.
ಸರ್ಕಾರದ ಆದೇಶದಂತೆ ಮೆಕ್ಕೆಜೋಳವು ಗುಣಮಟ್ಟದಿಂದ ಕೂಡಿರಬೇಕು. ತೇವಾಂಶ ಶೇ.12ಕ್ಕಿಂತ ಕಡಿಮೆ ಇರಬೇಕು. ಸೋಂಕು (Fungas Infection)  ಶೇ.3ಕ್ಕಿಂತ ಕಡಿಮೆ ಇರಬೇಕು. 100 ಗ್ರಾಂ ತೂಕಕ್ಕೆ 350 ಕಾಳು ಬರಬೇಕು. ಟಾಸ್ಕಿನ್ ಲೆವೆಲ್ 20 ಪಿಪಿಟಿ ಕ್ಕಿಂತ ಕಡಿಮೆ ಇರಬೇಕು. ಕಸ ಕಡ್ಡಿ ಇತ್ಯಾದಿ ಶೇ.1 ಕ್ಕಿಂತ ಕಡಿಮೆ ಇರಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಚಿತ್ರದುರ್ಗ ಶಾಖಾ ವ್ಯವಸ್ಥಾಪಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now