Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

Facebook
Twitter
Telegram
WhatsApp

 

 

ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ ಹೋಗುವ ಭಾಗ್ಯಾ ಮಾತ್ರ ಸಿಕ್ಕಿಲ್ಲ. ಯಾಕಂದ್ರೆ ಜಾಮೀನಿನ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ, ಜಾಮೀನು ಸಿಕ್ಕರೂ ಜೈಲಿನಲ್ಲಿಯೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ.

 

ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಸಿಕ್ಕಿದೆ. ಷರತ್ತು ಬದ್ಧ ಜಾಮೀನಿನಲ್ಲಿ ಪರ್ಸನಲ್ ಬಾಂಡ್ ಶ್ಯೂರಿಟಿ, ಸಾಕ್ಷಿಗಳ ಮೇಲೆ‌ ಪ್ರಭಾವ ಬೀರಬಾರದು, ದೇಶ ಬಿಟ್ಟು ಹೋಗಬಾರದು ಎಂಬ ಷರತ್ತನ್ನು ವಿಧಿಸಿ ಜಾಮೀನು ನೀಡಲಾಗಿದೆ. ಜಾಮೀನು ಸಿಕ್ಕಿದೆ‌ ಎಂದು ರೇವಣ್ಣ ಅವರಿಗೆ ತಿಳಿಸಿದ ಕೂಡಲೇ ಸಮಾಧಾನಗೊಂಡಿದ್ದಾರೆ. ದೇವರಿಗೆ ಪ್ರಾರ್ಥಸಿ, ನಿಟ್ಟುಸಿರು ಬಿಟ್ಟಿದ್ದಾರೆ.

ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ಬೇಲ್ ಆರ್ಡರ್ ಕಾಪಿಯನ್ನು ವಕೀಲರು ಪಡೆದುಕೊಂಡಿದ್ದಾರೆ. ಇಂದು ಜಾಮೀನು ಮಂಜೂರು ಆದರೂ ಕೂಡ ರೇವಣ್ಣ ಅವರು ಪರಪ್ಪನಾಗ್ರಹರದಿಂದ ಬಿಡುಗಡೆ ಭಾಗ್ಯವಿಲ್ಲ. ನಾಳೆ 42ನೇ ಜನಪ್ರತಿನಿಧಿ‌ ನ್ಯಾಯಾಲಯದಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಇಂದು ಜಾಮೀನು ಅರ್ಜಿಯ ಎಲ್ಲಾ ಪ್ರಕ್ರಿಯೆಗಳನ್ನು‌ ಮುಗಿಸಿ ಬಳಿಕ ನಾಳೆ ಬೆಳಗ್ಗೆ ಜಾಮೀನು ಪ್ರತಿ ಜೈಲಿಗೆ ತಲುಪಿಸಬೇಕಾಗುತ್ತದೆ. ಇದಾದ ಬಳಿಕ ಹೆಚ್​.ಡಿ ರೇವಣ್ಣ ಅವರಿಗೆ ಬಿಡುಗಡೆ ಸಾಧ್ಯತೆ ಇದೆ.

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿಯೇ ಇದ್ದಾರೆ. ನೋಟೀಸ್ ಕೊಟ್ಟರು, ದೂರುಗಳು ದಾಖಲಾದರೂ ಹಾಸನದ ಕಡೆಗೆ ಬಂದಿಲ್ಲ. ಯಾವಾಗ ಬರ್ತಾರೆ ಎಂಬ ಸುಳಿವು ಸಿಗುತ್ತಿಲ್ಲ ರಿಟರ್ನ್ ಟಿಕೆಟ್ ಬುಕ್ ಮಾಡಿಕೊಂಡಿದ್ದರು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಇದೀಗ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಜೈಲಲ್ಲಿದ್ದ ರೇವಣ್ಣ ಅವರಿಗೇನೋ ಬೇಲ್ ಸಿಕ್ಕಿದೆ. ಕೊಂಚ ನಿರಾಳರಾಗಿದ್ದಾರೆ. ಪ್ರಜ್ವಲ್ ರೇವಣ್ಣ ಕೂಡ ಜಾಮೀನಿಗೆ ಅರ್ಜಿ ಹಾಕಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!