Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಮಂಡ್ಯವನ್ನೂ ಜೆಡಿಎಸ್ ಗೆ ಬಿಟ್ಟುಕೊಟ್ಟರೂ ಸುಮಲತಾ ಸ್ಪರ್ಧೆ ಮಂಡ್ಯದಲ್ಲೇ : ಆಪ್ತರಿಂದ ಸ್ಪಷ್ಟನೆ

Facebook
Twitter
Telegram
WhatsApp

 

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿದೆ. ಹೀಗಾಗಿ ಬಿಜೆಪಿ ಐದಾರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ. ಅದರಲ್ಲೂ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಬೇಕೇ ಬೇಕು ಎಂಬ ಬೇಡಿಕೆಯನ್ನು ಗಟ್ಟಿಯಾಗಿ ತಿಳಿಸಿದೆ. ಇದರಿಂದಾಗಿ ಸುಮಲತಾ ಸ್ಪರ್ಧೆಯ ಬಗ್ಗೆಯೇ ಎಲ್ಲೆಲ್ಲೂ ಚರ್ಚೆಗಳಾಗುತ್ತಿವೆ. ಇತ್ತಿಚೆಗಷ್ಟೇ ಸುಮಲತಾ ಬಿಜೆಪಿ ಪಕ್ಷ ಸೇರಿದ್ದರು. ಹೀಗಾಗಿ ಟಿಕೆಟ್ ಸಿಗುವುದು ಕಷ್ಟಸಾಧ್ಯ. ಮಂಡ್ಯ ಬಿಟ್ಟು, ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗಳ ನಡುವೆ ಸುಮಲತಾ ಆಪ್ತರೊಬ್ಬರು, ಮಂಡ್ಯದಿಂದಾನೇ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಸುಮಲತಾ ಅವರ ಆಪ್ತ ಹನಕೆರೆ ಶಶಿಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ, ಸುಮಲತಾ 2024ಕ್ಕೆ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿರುತ್ತಾರೆ. ಬಿಜೆಪಿ ಮಂಡ್ಯವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟರು ಸುಮಲತಾ ಮಂಡ್ಯದಿಂದಾನೇ ಸ್ಪರ್ಧೆ ಮಾಡುತ್ತಾರೆ. ಇತ್ತಿಚಿಗೆ ಕೆಲ ಗೊಂದಲಗಳು ಇದ್ದವು. ಕಳೆದ 4 ವರ್ಷದಿಂದ ಸುಮಲತಾ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂದಿದ್ದಾರೆ.

ಸುಮಲತಾ ಅವರಿಗೆ ಮಂಡ್ಯದಿಂದ ಟಿಕೆಟ್ ಇಲ್ಲ ಎಂಬುದಾಗಿ ಚರ್ಚೆ ನಡೆಯುತ್ತಾ ಇದೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾನು ಇರುತ್ತೇನೆ ಎಂದು ಸುಮಲತಾ ನಮಗೆಲ್ಲಾ ಹೇಳಿದ್ದಾರೆ. ಸುಮಲತಾ ಅವರೂ ಇನ್ನು ಬಿಜೆಪಿಯ ಸದಸ್ಯತ್ವ ಪಡೆದಿಲ್ಲ. ಈಗಲೂ ಸುಮಲತಾ ಪಕ್ಷೇತರ ಸಂಸದೆಯಾಗಿದ್ದಾರೆ. ಬಿಜೆಪಿ ಕೂಡ ಮಂಡ್ಯ ಕ್ಷೇತ್ರವನ್ನು ಉಳಿಸಿಕೊಳ್ಳುವ ವಿಶ್ವಾಸ ಇದೆ. ಪಕ್ಷ ಯಾವುದಾದರೇನು ಸುಮಲತಾ ಅಭ್ಯರ್ಥಿಯಾಗಿ ಇರಬೇಕು. ಸುಮಲತಾ ಯಾವ ಪಕ್ಷದಿಂದ ಸ್ಪರ್ಧೆ ಮಾಡಬೇಕು ಎಂಬುದು ಅವರೇ ತೀರ್ಮಾನ ಮಾಡುತ್ತಾರೆ. ಆದರೆ ಅವರಿಗೆ ನಮ್ಮ ಬೆಂಬಲ ಇದ್ದೆ ಇರುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!