ಬೆಂಗಳೂರು: ಈ ಬಾರಿ ಕಾಂಗ್ರೆಸ್ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದರೆ ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿದ್ದಾರೆ. ಆದರೆ ಇದು ಹಳೆಯ ಸುದ್ದಿಯಾದರೂ ಇಂದು ಶಾಕಿಂಗ್ ಎನಿಸುವಂತ ಬೆಳವಣಿಗೆ ನಡೆದಿದೆ. ಅದುವೇ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಸದಾಶಿವನಗರದ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ರೇಣುಕಾಚಾರ್ಯ ಮಾತನಾಡಿದ್ದರೆ. ಹೂಗುಚ್ಛ ನೀಡಿ, ಕುಶಲೋಪರಿ ವಿಚಾರಿಸಿದ್ದಾರೆ. ಸದ್ಯದ ರಾಜಕೀಯ ವಿಚಾರಗಳು ಕೂಡ ಚರ್ಚೆಯಾಗಿದೆ. ಇಬ್ಬರು ಒಂದಷ್ಟು ಸಮಯ ಮಾತುಕಥೆ ನಡೆಸಿದ್ದಾರೆ.
ಆದರೆ ರೇಣುಕಾಚಾರ್ಯ ಅವರು ಇದ್ದಕ್ಕಿದ್ದ ಹಾಗೇ ಡಿಸಿಎಂ ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಇನ್ನು ಆ ಭೇಟಿ ನಿಗೂಢವಾಗಿಯೇ ಇದೆ. ಎಂಪಿ ರೇಣುಕಾಚಾರ್ಯ ಅವರು ಈ ಬಾರಿಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸೋಲು ಕಂಡಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






