Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಮೌಢ್ಯಚರಣೆ ಹಾಗೂ ದುಶ್ಚಟಗಳಿಂದ ದೂರವಿರಿ : ಷಡಕ್ಷರಮುನಿ ಸ್ವಾಮೀಜಿ ಕಿವಿಮಾತು

---Advertisement---

 

 

ಹೊಸದುರ್ಗ : ದೇವರು, ಭಕ್ತಿ, ಧಾರ್ಮಿಕ ಕಾರ್ಯಗಳು ಮೌಢ್ಯಾಚರಣೆ ಕೇಂದ್ರಗಳಾಗದೇ, ಪರಸ್ಪರ ಸಹಬಾಳ್ವೆ, ಸಂಘಟನೆ ಕೇಂದ್ರಗಳಾಗಬೇಕು. ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಮೌಢ್ಯಚರಣೆ ಹಾಗೂ ದುಶ್ಚಟಗಳಿಂದ ದೂರವಿರಿ ಎಂದು ಹಿರಿಯೂರಿನ ಕೋಡಿಹಳ್ಳಿ ಆದಿಜಾಂವ ಮಠದ ಷಡಕ್ಷರಮುನಿ ಸ್ವಾಮೀಜಿ ಕಿವಿಮಾತು ಹೇಳಿದರು.

ಪೀಲಾಪುರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಕಾಲೋನಿಯಲ್ಲಿ ಭಾನುವಾರ ಆಯೋಜಿಸಿದ್ದ ‘ದುಗಾ೯ಂಭಿಕ ದೇವಿಯ ನೂತನ ದೇವಸ್ಥಾನದ ಪ್ರರಂಭೋತ್ಸವ’ದ ಧಾರ್ಮಿಕ ಕಾರ್ಯಕ್ರಮ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಪ್ರತಿಯೊಬ್ಬ ಪ್ರಜೆಗಳು ಸಂವಿಧಾನದ ಆಶಯದಂತೆ ವಿದ್ಯಾವಂತರಾಗಿ, ಆಥಿ೯ಕ , ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು. ಅನ್ಯ ಸಮಾಜದವರೊಂದಿಗೆ ಸ್ನೇಹ, ಸಹಬಾಳ್ವೆಯಿಂದ ಇದ್ದು, ತಮ್ಮ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಿ ಎಂದು ಮಾರ್ಗದರ್ಶನ ನೀಡಿದರು.

ಶಾಸಕ ಬಿ.ಜಿ. ಗೋವಿಂದಪ್ಪ ದುಗಾ೯ಬಿಂಕ ದೇವಿ ನೂತನ ಶಿಲಾಮೂತಿ೯ ಗೆ ಪುಷ್ಪಾರ್ಚನೆ ನೇರವೇರಿಸಿದರು.

ಸದ್ಗುರು ಆಯುರ್ವೇದಿಕ್ ಉತ್ಪನ್ನಗಳ ಮಾಲೀಕ ಡಿ.ಎಸ್.ಪ್ರದೀಪ್ ಮಾತನಾಡಿ, ದೇವರು ಧರ್ಮದ ಜೊತೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಅಂಬೇಡ್ಕರ್ ಅವರ ಆಶಯದಂತೆ ಪ್ರತಿ ಊರುಗಳಲ್ಲಿ ಗ್ರಂಥಾಲಯಗಳಿರಬೇಕು. ನಾವು ಕೂಡ ಹೆಚ್ಚು ಒತ್ತು ಕೊಡುತ್ತಿರುವುದು ಶಿಕ್ಷಣಕ್ಕೆ ಆಗಾಗಿ ಕೆಲವು ಪ್ರಾಥಮಿಕ ಶಾಲೆಗಳನ್ನು ದತ್ತು ಪಡೆಯುವ ಮೂಲಕ ಎಲ್ಲಾ ವಗ೯ದ ಮಕ್ಕಳಿಗೆ ಶಿಕ್ಷಣ ಕೊಡಿಸುವ ಒಂದು ಸಣ್ಣ ಸಾಮಾಜಿಕ ಸೇವೆಯನ್ನು ನಮ್ಮ ಸಂಸ್ಥೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಸಮಾಜ ಮುಖಂಡ ಗೂಳಿಹಟ್ಟಿ ಕೃಷ್ಣಮೂತಿ೯, ಮೈಸೂರಿನ ಪ್ರಧಾನ ಋತ್ವಿಜರಾದ ದಯಾನಂದ ಶರ್ಮ, ಶಿಲ್ಪಿ ಬಾಬುಚರಣ, ಇಂಜಿನಿಯರ್ ಹೆಚ್. ಅಂಜಿನಪ್ಪ, ಶಿಕ್ಷಕ ಆರ್. ನಾಗೇಶ್, ಗ್ರಾ.ಪಂ ಸದಸ್ಯ ಪ್ರಕಾಶ್, ಆರ್.ಡಿ.ಪಿ.ಆರ್ ಇಲಾಖೆಯ ಸೌಮ್ಯ ಕೆ, ಎಸ್.ಆರ್.ಟಿ.ಸಿ ಇಲಾಖೆಯ ಶಶಿರೇಖಾ, ಮುಖಂಡರುಗಳಾದ ರಂಗಪ್ಪ, ಬೆಳ್ಳುಳ್ಳಿ ರಂಗಪ್ಪ, ಔ .ಹನುಮಂತಪ್ಪ, ಶಿ.ಹನುಮಂತಪ್ಪ, ಪಿ .ಇ .ರವಿ , ಬಸವರಾಜ್, ಡಿ.ರಂಗಪ್ಪ, ಹೆಚ್.ರಾಜ್ ಕುಮಾರ್ , ಪಿ.ಹೆಚ್.ಲೋಕೇಶ್, ರಾಜ್ಯಸಂಪನ್ಮೂಲ ವ್ಯಕ್ತಿ ಪೀಲಾಪುರ ಆರ್ .ಕಂಠೇಶ್ ಸೇರಿದಂತೆ ಹಲವರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment