Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ಮಂಗಳವಾರ ತಾಲ್ಲೂಕು ಕಚೇರಿಗೆ ಡಿಸಿ ಭೇಟಿ: ಸಾರ್ವಜನಿಕರ ಕುಂದು ಕೊರತೆ ಆಲಿಕೆ

Facebook
Twitter
Telegram
WhatsApp

ಚಿತ್ರದುರ್ಗ, (ಸೆಪ್ಟೆಂಬರ್. 06) : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಪ್ರತಿ ಮಂಗಳವಾರ ಜಿಲ್ಲಾ ವ್ಯಾಪ್ತಿಯ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡಿ, ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಲಭ್ಯವಿದ್ದು, ಜನ ಸಾಮಾನ್ಯರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.

ಸೆಪ್ಟೆಂಬರ್ 6 ಮಂಗಳವಾರ ಮತ್ತು ನವೆಂಬರ್ 8 ಮಂಗಳವಾರದಂದು ಹೊಳಲ್ಕೆರೆ ತಾಲ್ಲೂಕು ಕಚೇರಿ,

ಸೆಪ್ಟೆಂಬರ್ 13 ಮಂಗಳವಾರ ಮತ್ತು ನವೆಂಬರ್ 15 ಮಂಗಳವಾರದಂದು ಹಿರಿಯೂರು ತಾಲ್ಲೂಕು ಕಚೇರಿ,

ಸೆಪ್ಟೆಂಬರ್ 20 ಮಂಗಳವಾರ ಹಾಗೂ ನವೆಂಬರ್ 22 ಮಂಗಳವಾರ ಚಳ್ಳಕೆರೆ ತಾಲ್ಲೂಕು ಕಚೇರಿ,

ಸೆಪ್ಟೆಂಬರ್ 27 ಮಂಗಳವಾರ ಹಾಗೂ ನವೆಂಬರ್ 29 ಮಂಗಳವಾರದಂದು ಹೊಸದುರ್ಗ ತಾಲ್ಲೂಕು ಕಚೇರಿ,

ಅಕ್ಟೋಬರ್ 11 ಮಂಗಳವಾರ ಹಾಗೂ ಡಿಸೆಂಬರ್ 6 ಮಂಗಳವಾರದಂದು ಮೊಳಕಾಲ್ಮುರು ತಾಲ್ಲೂಕು ಕಚೇರಿಗೆ ಭೇಟಿ, ಅಕ್ಟೋಬರ್ 18 ಮಂಗಳವಾರ ಹಾಗೂ ಡಿಸೆಂಬರ್ 13 ಮಂಗಳವಾರದಂದು ಚಿತ್ರದುರ್ಗ ತಾಲ್ಲೂಕು ಕಚೇರಿಗೆ ಭೇಟಿ ನೀಡಲಿದ್ದಾರೆ.

ಸಾರ್ವಜನಿಕರು ತೊಂದರೆ, ಸಮಸ್ಯೆಗಳಿಗೆ ಭೇಟಿ ಮಾಡಿ, ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!