ಈ ದೇಶದ ಪ್ರತಿಯೊಬ್ಬರು ಸಹ RSS : ಸಿಎಂ ಬೊಮ್ಮಾಯಿ

suddionenews
1 Min Read

ಬೆಳಗಾವಿ: ಸಿಂದಗಿ ಉಪಚುನಾವಣೆ ಹಿನ್ನೆಲೆ ಜಿಲ್ಲೆಗೆ ಭೇಟಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಈ ದೇಶದಲ್ಲಿರುವ ಪ್ರತಿಯೊಬ್ಬರು ಆರ್ಎಸ್ಎಸ್ ನವರೇ. ಈ ಮುಂಚೆ ಸಿದ್ದರಾಮಣ್ಣ ನಮ್ಮ ಜೊತೆ ಇದ್ದಾಗ ಚೆನ್ನಾಗಿಯೇ ಇದ್ರು. ಆದ್ರೆ ಕಾಂಗ್ರೆಸ್ ಗೆ ಹೋಗಿ ಕೆಟ್ಟಿದ್ದಾರೆ.

ಕಾಂಗ್ರೆಸ್ ಸರ್ಕಾರವಿದ್ದಾಗ ಸರ್ಕಾರದ ಭಾಗ್ಯ ಯಾರ ಮನೆ ಬಾಗಿಲಿಗೂ ತಲುಪಲೇ ಇಲ್ಲ. ಅಧಿಕಾರವಿದ್ದಾಗ ಕಾಂಗ್ರೆಸ್ ಕಬ್ಬಿನಂತೆ ಇರ್ತಾರೆ. ಇಲ್ಲದೆ ಹೋದರೆ ಇಲ್ಲದೆ ಇದ್ರೆ ಹತ್ತಿಯಂತೆ ಇರ್ತಾರೆ. ಮೈತ್ರಿ ಸರ್ಕಾರವನ್ನ ಅಪವಿತ್ರ ಮಾಡಿದ್ದೇ ಈ ಕಾಂಗ್ರೆಸ್. ಕಾಂಗ್ರೆಸ್ ಬಹಳ ತ್ಯಾಗ ಮಾಡಿದೆ ಅಂತ ಸಿದ್ದರಾಮಯ್ಯ ಅವರು ಹೇಳ್ತಾರೆ. ತ್ಯಾಗ ಮಾಡಿದೆ ಹೌದು. ಆದ್ರೆ ಸುಭಾಷ್ ಚಂದ್ರ ಬೋಸ್, ಲೋಕಮಾನ್ ತಿಲಕ್ ಕಾಂಗ್ರೆಸ್ ನವರಾಗಿದ್ರಾ..? ಕಾಂಗ್ರೆಸ್ ನವರೇ ಎಷ್ಟೋ ಜನ ಬಿಜೆಪಿಗೆ ಬಂದಿಲ್ವಾ ಎಂದು ಪ್ರಶ್ನಿಸಿದರು.

Share This Article
Leave a Comment

Leave a Reply

Your email address will not be published. Required fields are marked *