Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಸರ ಸಂರಕ್ಷಣೆ ಕುರಿತು ಎಲ್ಲರಲ್ಲಿಯೂ ಜಾಗೃತಿ ಅಗತ್ಯ : ಕನಕರಾಜ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ಹೊಳಲ್ಕೆರೆ ರಸ್ತೆಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷ ಕನಕರಾಜ್ ಗಿಡ ನೆಟ್ಟು ಮಾತನಾಡುತ್ತ 1973 ರಿಂದಲೂ ಪ್ರತಿ ವರ್ಷ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ರಸ್ತೆ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ದೊಡ್ಡ ದೊಡ್ಡ ಮರಗಳನ್ನು ಕಡಿಯಲಾಗಿದೆ. ಇದಕ್ಕೆ ಪರ್ಯಾಯವಾಗಿ ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕಾಗಿದೆ. ಗಿಡ-ಮರಗಳನ್ನು ಕಡಿದು ನಾಶಪಡಿಸುವುದರಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಸಮಯಕ್ಕೆ ಸರಿಯಾಗಿ ಮಳೆ ಬರುವುದಿಲ್ಲ. ಹಾಗಾಗಿ ಪರಿಸರ ಸಂರಕ್ಷಣೆ ಕುರಿತು ಎಲ್ಲರಲ್ಲಿಯೂ ಜಾಗೃತಿ ಮೂಡಬೇಕು ಎಂದು ತಿಳಿಸಿದರು.

ನಗರಸಭೆ ಪೌರಾಯುಕ್ತರಾದ ಶ್ರೀಮತಿ ರೇಣುಕ ಮಾತನಾಡಿ ಪ್ರತಿಯೊಬ್ಬರು ಒಂದೊಂದು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಬೇಕು. ಆಗ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಕೊಡುಗೆಯಾಗಿ ನೀಡಬಹುದು. ಗಿಡ-ಮರಗಳಿಲ್ಲದಿದ್ದರೆ ಮಾನವನ ಉಸಿರಾಟಕ್ಕೆ ಶುದ್ದವಾದ ಗಾಳಿ ಸಿಗುವುದಿಲ್ಲ ಎಂದು ಹೇಳಿದರು.

ರೋಟರಿ ಕ್ಲಬ್ ಚಿತ್ರದುರ್ಗ ನಿಯೋಜಿತ ಅಧ್ಯಕ್ಷ ವೀರಣ್ಣ, ಜಿ.ಎ.ವಿಶ್ವನಾಥ್, ಜಯಶ್ರಿಷಾ, ತರುಣ್‍ಷಾ, ಶಿವಣ್ಣ, ಗುರುರಾಜ್, ಹೆಗ್ಗನಗೌಡ್ರು, ಡಾ.ತಿಪ್ಪೇಸ್ವಾಮಿ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವರಶ್ಮಿ ಅಕ್ಕ ಇನ್ನು ಅನೇಕರು ವಿಶ್ವಪರಿಸರ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!