Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಸರ ಸಂರಕ್ಷಣೆ ಕುರಿತು ಎಲ್ಲರಲ್ಲಿಯೂ ಜಾಗೃತಿ ಅಗತ್ಯ : ಕನಕರಾಜ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ಹೊಳಲ್ಕೆರೆ ರಸ್ತೆಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷ ಕನಕರಾಜ್ ಗಿಡ ನೆಟ್ಟು ಮಾತನಾಡುತ್ತ 1973 ರಿಂದಲೂ ಪ್ರತಿ ವರ್ಷ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ರಸ್ತೆ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ದೊಡ್ಡ ದೊಡ್ಡ ಮರಗಳನ್ನು ಕಡಿಯಲಾಗಿದೆ. ಇದಕ್ಕೆ ಪರ್ಯಾಯವಾಗಿ ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕಾಗಿದೆ. ಗಿಡ-ಮರಗಳನ್ನು ಕಡಿದು ನಾಶಪಡಿಸುವುದರಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಸಮಯಕ್ಕೆ ಸರಿಯಾಗಿ ಮಳೆ ಬರುವುದಿಲ್ಲ. ಹಾಗಾಗಿ ಪರಿಸರ ಸಂರಕ್ಷಣೆ ಕುರಿತು ಎಲ್ಲರಲ್ಲಿಯೂ ಜಾಗೃತಿ ಮೂಡಬೇಕು ಎಂದು ತಿಳಿಸಿದರು.

ನಗರಸಭೆ ಪೌರಾಯುಕ್ತರಾದ ಶ್ರೀಮತಿ ರೇಣುಕ ಮಾತನಾಡಿ ಪ್ರತಿಯೊಬ್ಬರು ಒಂದೊಂದು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಬೇಕು. ಆಗ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಕೊಡುಗೆಯಾಗಿ ನೀಡಬಹುದು. ಗಿಡ-ಮರಗಳಿಲ್ಲದಿದ್ದರೆ ಮಾನವನ ಉಸಿರಾಟಕ್ಕೆ ಶುದ್ದವಾದ ಗಾಳಿ ಸಿಗುವುದಿಲ್ಲ ಎಂದು ಹೇಳಿದರು.

ರೋಟರಿ ಕ್ಲಬ್ ಚಿತ್ರದುರ್ಗ ನಿಯೋಜಿತ ಅಧ್ಯಕ್ಷ ವೀರಣ್ಣ, ಜಿ.ಎ.ವಿಶ್ವನಾಥ್, ಜಯಶ್ರಿಷಾ, ತರುಣ್‍ಷಾ, ಶಿವಣ್ಣ, ಗುರುರಾಜ್, ಹೆಗ್ಗನಗೌಡ್ರು, ಡಾ.ತಿಪ್ಪೇಸ್ವಾಮಿ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವರಶ್ಮಿ ಅಕ್ಕ ಇನ್ನು ಅನೇಕರು ವಿಶ್ವಪರಿಸರ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment