Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯೋಧರ ಶಿಸ್ತು, ಏಕಾಗ್ರತೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು‌ : ಕೆ.ಪಿ.ಎಂ.ಗಣೇಶಯ್ಯ

---Advertisement---

 

ಸುದ್ದಿಒನ್, ಚಿತ್ರದುರ್ಗ, (ಜು.30): ಯೋಧರ ಶಿಸ್ತು, ಏಕಾಗ್ರತೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ದೇಶದ ಗಡಿ ಕಾಯಲು ಯೋಧನಿದ್ದರೆ, ಮನೆ ಮತ್ತು ಸಮಾಜವನ್ನು ಮುನ್ನೆಡೆಸುವ ಜವಾಬ್ದಾರಿ ಪ್ರತಿ ಮನುಷ್ಯನ ಕರ್ತವ್ಯವಾಗಿರುತ್ತದೆ ಎಂದು ರಂಗನಿರ್ದೇಶಕ ಹಾಗೂ ಕಸಾಪ ಜಿಲ್ಲಾ ಗೌ.ಕಾರ್ಯದರ್ಶಿ ಕೆ.ಪಿ.ಎಂ.ಗಣೇಶಯ್ಯ ಅಭಿಪ್ರಾಯಪಟ್ಟರು.

ನಗರದ ವಿದ್ಯಾವಿಕಾಸ ಶಾಲೆಯ ಆವರಣರದಲ್ಲಿ ಚಿನ್ಮಯ ಮಯೂರ ಯೋಗ ಕ್ರೀಡಾ ಸಂಸ್ಥೆಯು ಏರ್ಪಡಿಸಿದ್ದ ಕಾರ್ಗಿಲ್ ವಿಜಯೋತ್ಸವದ ಯೋಧ ನಮನ ಕಾರ್ಯಕ್ರಮದಲ್ಲಿ ವಿಶೇಷಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು.

ಯೋಧರು ಗಡಿ ಕಾಯುವ ಮುನ್ನ ಮಾನಸಿಕ ಮತ್ತು ದೈಹಿಕವಾಗಿ ಹಲವು ರೀತಿಯ ಕಸರತ್ತುಗಳನ್ನು ನಡೆಸುತ್ತಾರೆ. ಅಂತೆಯೇ ಒಂದು ಕುಟುಂಬ ಮತ್ತು ಸಮಾಜವನ್ನು ಪ್ರತಿನಿಧಿಸುವ ವ್ಯಕ್ತಿ ಅದೂ ಹೆಣ್ಣಾಗಿರಲಿ, ಗಂಡಾಗಿರಲಿ ತನ್ನ ಜವಾಬ್ದಾರಿಯನ್ನು ಅರಿತು ನಿಷ್ಠೆಯ ಬದುಕನ್ನು ಸಾಗಿಸಬೇಕಾಗುತ್ತದೆ. ಉತ್ತಮ ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ಯೋಗ ತರಬೇತಿಯನ್ನು ಪಡೆಯಬೇಕಾಗುತ್ತದೆ. ಶಾಂತಿ ನೆಮ್ಮದಿಯನ್ನು ಯೋಗದಿಂದ ಗಳಿಸಬಹುದು ಎಂದರು.

ನಿವೃತ್ತ ಉಪನ್ಯಾಸಕಿ ಶಾರದ ವೆಂಕಟೇಶರೆಡ್ಡಿ ಇವರು ಯೋಧರ ತ್ಯಾಗ ಬಲಿದಾನಗಳ ಕಾರ್ಗಿಲ್ ವಿಜಯದಿವಸ್ ಬಗ್ಗೆ ನೆನಪು ಮಾಡಿಕೊಂಡು ಯೋಧರಿಗೆ ನಮನ ಸಲ್ಲಿಸಿದರು. ಗುಡ್ಡದರಂಗವ್ವನಹಳ್ಳಿಯ ನಿವೃತ್ತ ಸೈನಿಕ ಪಿ.ಆರ್.ಶ್ರೀನಿವಾಸ್ ರೆಡ್ಡಿ ಇವರನ್ನು ಇದೇ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಚಿನ್ಮಯ ಮಯೂರ ಯೋಗ ಕ್ರೀಡಾ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅನುಸೂಯ ತಿಮ್ಮಾರೆಡ್ಡಿ ಸ್ವಾಗತಿಸಿದರು, ಕುಮಾರಿ ನಾಗಸಾರಿಕಾ ಪ್ರಾರ್ಥಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ.ಬಿ.ಮುರುಳಿ ವಂದಿಸಿದರು. ಯೋಗ ಶಿಕ್ಷಕಿ ಎಸ್.ಕೆ.ಸುನಿತ ನಿರೂಪಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...