Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಮಲಲ್ಲಾ ಪ್ರತಿಷ್ಠಾಪನೆಗೆ ಆಲಿಯಾ ಧರಿಸಿದ್ದ ಸೀರೆ ಮೇಲೆ ಎಲ್ಲರ ಚಿತ್ತ : ಅದಕ್ಕೆಲ್ಲಾ ಕಾರಣ ರಾಮಯಾಣ

---Advertisement---

ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಈ ಸುಂದರ ಗಳಿಗೆಗೆ ತಾರೆಯರ ಮೆರಗು ಕೂಡ ಇತ್ತು. ಬಾಲಿವುಡ್, ಸ್ಯಾಂಡಲ್ ವುಡ್ ಸ್ಟಾರ್ ಗಳಿಗೂ ಆಹ್ವಾನ ನೀಡಲಾಗಿತ್ತು. ಎಲ್ಲರೂ ಸಾಂಪ್ರದಾಯಿಕ ಉಡುಗೆಯಲ್ಲಿ ಅಯೋಧ್ಯೆಗೆ ಧಾವಿಸಿ, ಬಾಲರಾಮನ ಭಕ್ತಿಗೆ ಪಾತ್ರರಾಗಿದ್ದಾರೆ. ಈ ವೇಳೆ ಬಾಲಿವುಡ್ ನಟಿ ಆಲಿಯಾ ಭಟ್ ಧರಿಸಿದ್ದ ಸೀರೆ ಎಲ್ಲರ ಗಮನ ಸೆಳೆದಿದೆ.

ನಮ್ಮ ರಾಜ್ಯದ ಮೈಸೂರು ಸಿಲ್ಕ್ ಸೀರೆಯನ್ನು ಧರಿಸಿದ್ದರು ಆಲಿಯಾ ಭಟ್. ರೇಷ್ಮೆ ಸೀರೆಯಲ್ಲಿ ಆಲಿಯಾ ಭಟ್ ಅತ್ಯಂತ ಸುಂದರವಾಗಿ ಕಾಣುತ್ತಿದ್ದರು. ಮೈತುಂಬಾ ಸೆರಗು ಹೊದ್ದು, ಕೂದಲಿಗೆ ತುರ್ಬನ್ನು ಹಾಕಿ, ಪಕ್ಕಾ ಗೃಹಿಣಿಯಂತೆ ಕಾಣಿಸಿಕೊಂಡಿದ್ದರು. ನಮ್ಮ ಕರ್ನಾಟಕದ ಮೈಸೂರು ಸಿಲ್ಕ್ ಸೀರೆಯಲ್ಲಿ ರಾಮಾಯಣವನ್ನೇ ಪ್ರದರ್ಶನ ಮಾಡಿದ್ದು ಎಲ್ಲರ ಗಮನವನ್ನು ಸೆಳೆದಿತ್ತು. ಸೀರೆಯಲ್ಲಿ ರಾಮಾಯಣದ ಕಲಾಕೃತಿಗಳು ಎದ್ದು ಕಾಣಿಸುತ್ತಿತ್ತು.

ಅಷ್ಟಕ್ಕೂ ಈ ಸೀರೆ ಸಿದ್ಧವಾಗಿದ್ದು ಎಲ್ಲಿ, ಹೇಗೆ ಎಂಬುದರ ಮಾಹಿತಿ ಇಲ್ಲಿದೆ. ಆಲಿಯಾ ಭಟ್ ತೊಟ್ಟಿದ್ದ ರಾಮಾಯಣ ಕಥೆಯನ್ನು ಸಾರುವ ಸೀರೆಯನ್ನು ಸಿದ್ದ ಮಾಡಿದ್ದು, ಮಾಧುರ್ಯ ಡಿಸೈನರ್. ನೀಲಿ ಬಣ್ಣದಿಂದ ಈ ಸೀರೆ ಕೂಡಿದ್ದು, ಸಿದ್ಧತೆ ಮಾಡಲು ಹತ್ತು ದಿನಗಳಾಗಿವೆ. ಈ ಬಗ್ಗೆ ಮಾಧುರ್ಯ ಡಿಸೈನ್ ಮುಖ್ಯಸ್ಥರಾದ ಭಾರತಿ ಹರೀಶ್ ಮಾತನಾಡಿ,’ರಾಮ ಮಂದಿರ ಉದ್ಘಾಟನೆಗೆ ಆಲಿಯಾ ಭಟ್, ಕರ್ನಾಟಕದ ಮೈಸೂರು ಸಿಲ್ಕ್ ಸೀರೆಯನ್ನು ಧರಿಸಿದ್ದರು. ಸೀರೆಯ ಪಲ್ಲುವಿನಲ್ಲಿ ರಾಮಾಯಣದ ಕಲಾಕೃತಿಯನ್ನು ಕೈಯಿಂದ ಮುದ್ರಿಸಲಾಗಿದೆ. ರಾಮನು ಶಿವಧನುಷನ್ನು ಮುರಿಯುವುದು, ರಾಮನನ್ನು ಕಾಡಿಗೆ ಹೋಗುವಂತೆ ಹೇಳುವುದು, ಗಂಗೆಯ ಸೇತುವೆ, ಚಿನ್ನದ ಜಿಂಕೆ ಹೀಗೆ ರಾಮಾಯಣದಲ್ಲಿ ಬರುವ ಪ್ರಮುಖ ಅಂಶಗಳನ್ನು ಇಲ್ಲಿ ಎಳೆಎಳೆಯಾಗಿ ಬಿಡಿಸಲಾಗಿದೆ. ಹೀಗಾಗಿ ಎಲ್ಲರ ಚಿತ್ತ ಆಲಿಯಾ ಭಟ್ ಸೀರೆಯತ್ತ ನೆಟ್ಟಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment