ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಕುಸಿದು ಬಿದ್ದು ಮಾಜಿ ಶಾಸಕ ಸಾವು..!

1 Min Read

 

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗಾಗಿ ಟಿಕೆಟ್ ವಿಚಾರವಾಗಿ ಕೆಪಿಸಿಸಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆದಿತ್ತು. ಈ ಸಭೆಯಲ್ಲಿಯೇ ರೋಣಾ-ಗದಗ ಕ್ಷೇತ್ರದ ಮಾಜಿ ಶಾಸಕ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಬೆಳಗ್ಗಿನ ತಿಂಡಿ ತಿನ್ನದೆ ಶೈಲಪ್ಪ ಆಕಾಂಕ್ಷಿಗಳ ಸಬೆಗೆ ಬಂದಿದ್ದರಂತೆ. ಕಾರು ಇಳಿಯುತ್ತಿದ್ದಂತೆಯೇ ಸುಸ್ತಾದವರಂತೆ ಕಂಡಿದ್ದರಂತೆ. ಇನ್ನು ಸಬೆ ಆರಂಭವಾಗುತ್ತಲೇ ವಾಂತಿ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದರಂತೆ. ತಕ್ಷನ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆದ್ರೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯ ಆಕಾಂಕ್ಷಿಯಾಗಿದ್ದರಂತೆ. ಅದಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರಂತೆ. ಅದರ ಭಾಗವಾಗಿ ನಡೆಯುತ್ತಿದ್ದ ಸಭೆಯಲ್ಲಿ ಇಂದು ಭಾಗಿಯಾಗಲು ಬಂದಿದ್ದರಂತೆ. ಆದರೆ ಸಾವಿನ ಕದ ತಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಶೈಲಪ್ಪ ಅವರ ಸಾವಿನ ಬಳಿಕ ಸಬೆ ಮುಂದೂಡಲಾಗಿದ್ದು, ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *