Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಮತ್ತೊಂದು ಆಡಿಯೋ ವೈರಲ್ : ಡಿಸಿ, ಶಾಸಕರ ವಿರುದ್ಧ ಫುಲ್ ಗರಂ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.15 : ಮಾಜಿ ಶಾಸಕ ಗೂಳಿಹಟ್ಟಿ ಅವರದ್ದೇ ಎನ್ನಲಾದ ಮತ್ತೊಂದು ಆಡಿಯೋ ವೈರಲ್ ಆಗಿದೆ. ಆ ಆಡಿಯೋದಲ್ಲಿ ಗೂಳಿಹಟ್ಟಿ ಶೇಖರ್ ಅವರು ಜಿಲ್ಲಾಧಿಕಾರಿ ದಿವ್ಯಪ್ರಭು ಹಾಗೂ ಹೊಸದುರ್ಗ ಶಾಸಕರ ವಿರುದ್ಧ ಗರಂ ಆಗಿದ್ದಾರೆ. ಈ ಆಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿರುವುದರ ಜೊತೆಗೆ ಚರ್ಚೆಗೆ ಗ್ರಾಸವಾಗಿದೆ.

ನಾನು ಆಡಳಿತ ಪಕ್ಷದ ಶಾಸಕನಾಗಿದ್ದಾಗ ನನಗೆ ಸಾಕಷ್ಟು ಕಿರಿಕಿರಿ ಕೊಟ್ಟಿದ್ದಾರೆ. ಪ್ರತಿ ಹೆಜ್ಜೆ ಹೆಜ್ಜೆಗೆ ಸಾಕಷ್ಟು ತೊಂದರೆ ಕೊಟ್ಟಿದ್ದಾರೆ. ಆದರೆ ಈಗ ನಾನು ಹಾಗೆ ಮಾಡುತ್ತಿಲ್ಲ. ನಮ್ಮ ಹುಡುಗನನ್ನು ಪೊಲೀಸರು ಹೊಡೆದು ಹೊಡೆದು ಸಾಯಿಸಿದರು. ಹಿಂದೆ ಲೇಔಟ್ ಗೆಲ್ಲಾ ಮಣ್ಣು ಹೊಡೆದಿದ್ದರು. ಡಿಸಿ ದಿವ್ಯಾ ಮೇಡಂ ತುಂಬಾ ಸ್ಟ್ರಿಕ್ಟ್ ಎಂದಿದ್ದಾರೆ.

ಡಿಸಿ ಬಗ್ಗೆ ಮಾತನಾಡಿರುವ ಮಾತುಗಳಲ್ಲಿ, ಡಿಸಿ ದಿವ್ಯ ಮೇಡಂ ಅವರಿಗೆ ಹೊಸದುರ್ಗದಿಂದ ಫೋನ್ ಮಾಡಿ ದೂರು ನೀಡುತ್ತಿದ್ದರು. ಡಿಸಿ ಮೇಡಂ ಸ್ಟ್ರಿಕ್ಟ್ ಆಫೀಸರ್. ದೂರು ಕೊಟ್ಟ ಮೇಲೆ ಅಲ್ಲಿಂದ ಕಳುಹಿಸಿ, ಕೇಸ್ ಮಾಡಿಸಿದರು. ಲೇಔಟ್ ಗಳಿಗೆ ಈಗಲೂ ಮಣ್ಣು ಹೊಡೆಯುತ್ತಿದ್ದಾರೆ. ಆದರೆ ಡಿಸಿ ಮೇಡಂಗೆ ಒಂದೇ ಒಂದು ಟ್ರ್ಯಾಕ್ಟರ್ ಹಿಡಿಸುವುದಕ್ಕೂ ಆಗುತ್ತಿಲ್ಲ ಎಂಬ ಮಾತುಗಳು ಆಡಿಯೋದಲ್ಲಿ ಕೇಳಿ ಬರುತ್ತಿದೆ. ಈಗಾಗಲೇ ಈ ಆಡಿಯೋ ಎಲ್ಲೆಡೆ ವೈರಲ್ ಆಗಿದೆ.

ಹಿಂದೆ ನಾವಿದ್ದಾಗ ಹೇಗೆ ಸ್ಟ್ರಿಕ್ ಮಾಡುತ್ತಿದ್ದಿರೋ ಈಗಲೂ ಹಾಗೇ ಮಾಡಿ. ಸಾಧ್ಯವಾದರೆ ಮಾಡಿ, ಇಲ್ಲಾಂದ್ರೆ ಆಡಳಿತ ಪಕ್ಷದವರ ಜೊತೆ ಹೊಂದಿಕೊಂಡು ಹೋಗುವುದಾದರೆ ನಮ್ಮದೇನು ಅಭ್ಯಂತರವಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!