Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇವಲ ಗಂಟು ಮಾಡಿಕೊಳ್ಳುಲು ಶಾಸಕರಾಗಿದ್ದರೆಯೇ ವಿನಃ ಅಭಿವೃದ್ದಿಗಾಗಿ ಅಲ್ಲ : ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಆರೋಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 05 : ಮೊಳಕಾಲ್ಮೂರು
ಕ್ಷೇತ್ರದಲ್ಲಿ ‌ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದೆ ಕೇವಲ ಶಾಸಕರ ಆಪ್ತರಿಗೆ, ಟೆಂಡರ್ ದಾರರ ಜೊತೆ ಸೇರಿಕೊಂಡು ಹಣ ಮಾಡುವ ಉದ್ದೇಶದಿಂದ ಮಾತ್ರ ಶಾಸಕರಾಗಿದ್ದಾರೆ ಹೊರತು ಕ್ಷೇತ್ರದ ಜನರ ಕಷ್ಟಗಳಿಗೆ ಸ್ಪಂದಿನೆಗಲ್ಲಎಂದು ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಆರೋಪಿಸಿದ್ದಾರೆ.

ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕ್ಷೇತ್ರದ ಜನರು ಗುಳೆ ಹೋಗುವಂತಹ ಪರಿಸ್ಥಿತಿ ಇದೆ. ಆದರೆ ರಾಜ್ಯ ಸರಕಾರ ಮಾತ್ರ ರೈತರ ಬೆಳೆಗಳನ್ನು ಸಮೀಕ್ಷೆ ಮಾಡಿಸಿ ಪರಿಹಾರ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇನ್ನೂ ಗ್ಯಾರಂಟಿ ಯೋಜನೆಗಳ‌ ಪೂರ್ವದಲ್ಲಿ ಅನುದಾನ ಒದಗಿಸುತ್ತೇವೆ, ರಾಜ್ಯದ ಅಭಿವೃದ್ಧಿಗೆ ಕಂಕಣ ಬದ್ದರಾಗಿದ್ದೇವೆ ಎನ್ನುವ ಇವರುಗಳು, ಈವರೆಗೆ ಕ್ಷೇತ್ರದಲ್ಲಿ ಯಾವುದೇ ಜನಪರ ಯೋಜನೆಗಳ ಕಾರ್ಯಕ್ರಮ ಮಾಡಿಲ್ಲ.

ಕೂಡ್ಲಿಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಮೊಳಕಾಲ್ಮೂರು ಕ್ಷೇತ್ರಕ್ಕೆ ವರ್ಗವಾಣೆ ಮಾಡಿಸಿಕೊಳ್ಳುವುದು ಏಕೆ ? ಇದರ ಹಿಂದಿನ ಉದ್ದೇಶವಾದರೂ ಏನು ? ಕ್ಷೇತ್ರದ ವ್ಯಾಪ್ತಿಯಲ್ಲಿ ಮರಳು ದಂಧೆ ಹೇರಳವಾಗಿ ನಡೆಯುತ್ತಿದೆ. ಇನ್ನೂ ಭೂಮಿಯನ್ನು ಅಕ್ರಮವಾಗಿ ಕಬಳಿಸಿದವರ ಬಗ್ಗೆ ಇದುವರೆಗೆ ಕ್ರಮ ಜರುಗಿಸಿಲ್ಲ. ತಹಶೀಲ್ದಾರ್ ಹಾಗೂ ಮೇಲಿನ‌ ಅಧಿಕಾರಿಗಳು ಕೂಡ ಇವರ ಕಪಿ‌ ಮುಷ್ಠಿಯಲ್ಲಿ ಇದ್ದಾರೆಯೇ ಎಂಬುದು ಅನುಮಾನ ಕ್ಷೇತ್ರದ ಜನರಲ್ಲಿ ಕಾಡುತ್ತಿದೆ ಎಂದು ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...