Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

Exchange of 2,000 rupees notes: ಎರಡು ಸಾವಿರ ರೂಪಾಯಿ ನೋಟು ಬದಲಾವಣೆಗೆ ಗಡುವು ವಿಸ್ತರಿಸಿದ ಆರ್ ಬಿ ಐ :  ಎಲ್ಲಿಯವರೆಗೆ ? ಇಲ್ಲಿದೆ ಮಾಹಿತಿ…!

---Advertisement---

ಸುದ್ದಿಒನ್ : 2,000 ನೋಟುಗಳನ್ನು ಬದಲಾಯಿಸಲು ಅಥವಾ ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲು ಸೆಪ್ಟೆಂಬರ್ 30 ರ ಗಡುವನ್ನು ಆರ್‌ಬಿಐ ಇನ್ನೊಂದು ವಾರ ವಿಸ್ತರಿಸಿದೆ. ಜನರು ತಮ್ಮ ಬಳಿಯಿರುವ ರೂ. 2 ಸಾವಿರ ನೋಟುಗಳನ್ನು ಅಕ್ಟೋಬರ್ 7ರವರೆಗೆ ಬದಲಾಯಿಸಿಕೊಳ್ಳಬಹುದು. 

2000 ರೂಪಾಯಿ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲು ಅಥವಾ ಇತರ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ಆರ್‌ಬಿಐ ಈ ಗಡುವನ್ನು ಇನ್ನೊಂದು ವಾರಕ್ಕೆ ವಿಸ್ತರಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ 2000 ರೂಪಾಯಿ ನೋಟುಗಳನ್ನು ಮೇ 19 ರಿಂದ ಚಲಾವಣೆ ಸ್ಥಗಿತಗೊಳಿಸಿತ್ತು. ಜನರ ಬಳಿಯಿದ್ದ ರೂ. 2,000 ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು 4 ತಿಂಗಳುಗಳ ಕಾಲಾವಕಾಶ ನೀಡಲಾಗಿತ್ತು. ಆ ಗಡುವು ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು. ಇದೀಗ ಆರ್‌ಬಿಐ ಮತ್ತೊಮ್ಮೆ ಆ ಗಡುವನ್ನು ಇನ್ನೊಂದು ವಾರ ವಿಸ್ತರಿಸಿದೆ.

ಅಕ್ಟೋಬರ್ 7 ರವರೆಗೆ..
ರೂ. 2000 ನೋಟುಗಳ ವಿನಿಮಯದ ಗಡುವನ್ನು ವಿಸ್ತರಿಸಲು ಆರ್‌ಬಿಐ ನಿರ್ಧರಿಸಿದೆ. ಮಾರುಕಟ್ಟೆಯಿಂದ ರೂ. 2000 ನೋಟುಗಳು ಇನ್ನೂ ಸಂಪೂರ್ಣವಾಗಿ ಬ್ಯಾಂಕ್‌ಗಳಿಗೆ ವಾಪಸಾಗದ ಹಿನ್ನೆಲೆಯಲ್ಲಿ ಆರ್‌ಬಿಐ ಗಡುವನ್ನು ಇನ್ನೂ ಸ್ವಲ್ಪ ಕಾಲ ವಿಸ್ತರಿಸಲು ನಿರ್ಧರಿಸಿದೆ. ನಿರ್ದಿಷ್ಟವಾಗಿ, ಎನ್ಆರ್ಐಗಳು ಮತ್ತು ಇತರ ವ್ಯಾಪಾರಿಗಳು ರೂ. 2 ಸಾವಿರದ ನೋಟುಗಳು ಇನ್ನೂ ಬ್ಯಾಂಕಿಗೆ ಜಮೆಯಾಗದ ಕಾರಣ ಗಡುವನ್ನು ವಿಸ್ತರಿಸಲು ಆರ್ ಬಿಐ ನಿರ್ಧರಿಸಿದೆ. ಹಾಗಾಗಿ ರೂ. 2,000 ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲು ಅಥವಾ ಯಾವುದೇ ಬ್ಯಾಂಕ್ ಶಾಖೆಗಳು ಅಥವಾ ಅಂಚೆ ಕಚೇರಿಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಗಿದೆ.

93% ನೋಟುಗಳು ವಾಪಸ್..

ಈವರೆಗೆ ರೂ. 2 ಸಾವಿರ ನೋಟುಗಳ ಪೈಕಿ ಶೇ.93ರಷ್ಟು ನೋಟುಗಳು ಮಾತ್ರ ಬ್ಯಾಂಕ್ ಗಳಿಗೆ ವಾಪಸಾಗಿವೆ ಎಂದು ಆರ್ ಬಿಐ ಸೆಪ್ಟೆಂಬರ್ 2 ರಂದು ಪ್ರಕಟಿಸಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment