Exchange of 2,000 rupees notes: ಎರಡು ಸಾವಿರ ರೂಪಾಯಿ ನೋಟು ಬದಲಾವಣೆಗೆ ಗಡುವು ವಿಸ್ತರಿಸಿದ ಆರ್ ಬಿ ಐ :  ಎಲ್ಲಿಯವರೆಗೆ ? ಇಲ್ಲಿದೆ ಮಾಹಿತಿ…!

ಸುದ್ದಿಒನ್ : 2,000 ನೋಟುಗಳನ್ನು ಬದಲಾಯಿಸಲು ಅಥವಾ ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲು ಸೆಪ್ಟೆಂಬರ್ 30 ರ ಗಡುವನ್ನು ಆರ್‌ಬಿಐ ಇನ್ನೊಂದು ವಾರ ವಿಸ್ತರಿಸಿದೆ. ಜನರು ತಮ್ಮ ಬಳಿಯಿರುವ ರೂ. 2 ಸಾವಿರ ನೋಟುಗಳನ್ನು ಅಕ್ಟೋಬರ್ 7ರವರೆಗೆ ಬದಲಾಯಿಸಿಕೊಳ್ಳಬಹುದು. 

2000 ರೂಪಾಯಿ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲು ಅಥವಾ ಇತರ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ಆರ್‌ಬಿಐ ಈ ಗಡುವನ್ನು ಇನ್ನೊಂದು ವಾರಕ್ಕೆ ವಿಸ್ತರಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ 2000 ರೂಪಾಯಿ ನೋಟುಗಳನ್ನು ಮೇ 19 ರಿಂದ ಚಲಾವಣೆ ಸ್ಥಗಿತಗೊಳಿಸಿತ್ತು. ಜನರ ಬಳಿಯಿದ್ದ ರೂ. 2,000 ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು 4 ತಿಂಗಳುಗಳ ಕಾಲಾವಕಾಶ ನೀಡಲಾಗಿತ್ತು. ಆ ಗಡುವು ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು. ಇದೀಗ ಆರ್‌ಬಿಐ ಮತ್ತೊಮ್ಮೆ ಆ ಗಡುವನ್ನು ಇನ್ನೊಂದು ವಾರ ವಿಸ್ತರಿಸಿದೆ.

ಅಕ್ಟೋಬರ್ 7 ರವರೆಗೆ..
ರೂ. 2000 ನೋಟುಗಳ ವಿನಿಮಯದ ಗಡುವನ್ನು ವಿಸ್ತರಿಸಲು ಆರ್‌ಬಿಐ ನಿರ್ಧರಿಸಿದೆ. ಮಾರುಕಟ್ಟೆಯಿಂದ ರೂ. 2000 ನೋಟುಗಳು ಇನ್ನೂ ಸಂಪೂರ್ಣವಾಗಿ ಬ್ಯಾಂಕ್‌ಗಳಿಗೆ ವಾಪಸಾಗದ ಹಿನ್ನೆಲೆಯಲ್ಲಿ ಆರ್‌ಬಿಐ ಗಡುವನ್ನು ಇನ್ನೂ ಸ್ವಲ್ಪ ಕಾಲ ವಿಸ್ತರಿಸಲು ನಿರ್ಧರಿಸಿದೆ. ನಿರ್ದಿಷ್ಟವಾಗಿ, ಎನ್ಆರ್ಐಗಳು ಮತ್ತು ಇತರ ವ್ಯಾಪಾರಿಗಳು ರೂ. 2 ಸಾವಿರದ ನೋಟುಗಳು ಇನ್ನೂ ಬ್ಯಾಂಕಿಗೆ ಜಮೆಯಾಗದ ಕಾರಣ ಗಡುವನ್ನು ವಿಸ್ತರಿಸಲು ಆರ್ ಬಿಐ ನಿರ್ಧರಿಸಿದೆ. ಹಾಗಾಗಿ ರೂ. 2,000 ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲು ಅಥವಾ ಯಾವುದೇ ಬ್ಯಾಂಕ್ ಶಾಖೆಗಳು ಅಥವಾ ಅಂಚೆ ಕಚೇರಿಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಗಿದೆ.

93% ನೋಟುಗಳು ವಾಪಸ್..

ಈವರೆಗೆ ರೂ. 2 ಸಾವಿರ ನೋಟುಗಳ ಪೈಕಿ ಶೇ.93ರಷ್ಟು ನೋಟುಗಳು ಮಾತ್ರ ಬ್ಯಾಂಕ್ ಗಳಿಗೆ ವಾಪಸಾಗಿವೆ ಎಂದು ಆರ್ ಬಿಐ ಸೆಪ್ಟೆಂಬರ್ 2 ರಂದು ಪ್ರಕಟಿಸಿತ್ತು.

suddionenews

Recent Posts

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

2 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

7 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

16 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

29 minutes ago

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

3 hours ago