Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಕ್ಸಿಟ್ ಪೋಲ್ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿ..!

---Advertisement---

 

ಲೋಕಸಭಾ ಚುನಾವಣೆಯ ಫಲಿತಾಂಶಕ್ಕಾಗಿ ದೇಶವೇ ಕಾಯುತ್ತಿದೆ. ನಾಳೆಯೇ ಫಲಿತಾಂಶ ಹೊರ ಬೀಳಲಿದೆ. ಈಗಾಗಲೇ ಎಕ್ಸಿಟ್ ಪೋಲ್ ಹೊರ ಬಿದ್ದಿದ್ದು, ಬಿಜೆಪಿಯೇ ಮತ್ತೆ ಅಧಿಕಾರದ ಗದ್ದುಗೆ ಏರಲಿರುವ ಸೂಚನೆ ನೀಡಲಾಗಿದೆ. ಎಕ್ಸಿಟ್ ಪೋಲ್ ಬಳಿಕ ಷೇರು ಮಾರುಕಟ್ಟೆಯಲ್ಲಿ ಬಾರೀ ಸಂಚಲನವನ್ನೇ ಸೃಷ್ಟಿಸಿದೆ.

ಸೆನ್ಸೆಕ್ಟ್ 2000 ಸಾವಿರ ಪಾಯಿಂಟ್ ಗೆ ಜಿಗಿತ ಕಂಡರೆ, ನಿಫ್ಟಿ 600 ಅಂಕ ಜಾಸ್ತಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ 2621.98 ಪಾಯಿಂಟ್ ಆಗಿದೆ. 76,583 ಮಟ್ಟದಲ್ಲಿ ಪ್ರಾರಂಭವಾಗಿದೆ. ಎನ್​ಎಸ್​ಇ (National Stock Exchange) ನಿಫ್ಟಿ 807.20 ಪಾಯಿಂಟ್ (ಶೇ.3.58) ನೊಂದಿಗೆ ಆರಂಭವಾಗಿದೆ.

 

ಈ ಮೂಲಕ ಷೇರು ಮಾರುಕಟ್ಟೆಯು ಐತಿಹಾಸಿಕ ಉತ್ತುಂಗದಲ್ಲಿದೆ ಎಂದು ತಜ್ಞರು ವಿಶ್ಲೇಸುತ್ತಿದ್ದಾರೆ. ಎಕ್ಸಿಟ್ ಪೋಲ್ ಬಳಿಕವೇ ಷೇರು ಮಾರುಕಟ್ಟರ ಇಷ್ಟೊಂದು ಏರಿಕೆಯಾಗಿರುವಾಗ, ನಾಳೆ ಫಲಿತಾಂಶ ಹೊರ ಬಿದ್ದ ಬಳಿಕ ಇನ್ನು ಏನೆಲ್ಲಾ‌ ಬದಲಾವಣೆಯಾಗಬಹುದು ಎಂಬುದರ ಕುತೂಹಲವಿದೆ.

ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಬಿಜೆಪಿಯನ್ನು ಸೋಲಿಸಲೇಬೇಕೆಂಬ ಹಠಕ್ಕೆ‌ಕಾಂಗ್ರೆಸ್ ಬಿದ್ದಿತ್ತು. ಹೀಗಾಗಿ ಇಂಡಿಯಾ ಎಂಬ ಮೈತ್ರಿ ಕೂಟ ರಚನೆ ಮಾಡಿ, ಸ್ಪರ್ಧೆಗೆ ಇಳಿದಿತ್ತು. ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಬೇಕೆಂಬ ಹಠಕ್ಕೆ ಬಿದ್ದ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಸ್ಪರ್ಧೆ ನಡೆಸಿರುವುದೇ ಮೂರು ಕ್ಷೇತ್ರ. ಸದ್ಯ ಎಕ್ಸಿಟ್ ಪೋಲ್ ನಲ್ಲಿ ಮೂರು ಕ್ಷೇತ್ರಗಳನ್ನು ಗೆಲ್ಲಬಹುದು ಎಂದೇ ಹೇಳಲಾಗುತ್ತಿದೆ. ಎರಡು ಕ್ಷೇತ್ರದಲ್ಲಾದರೂ ಜೆಡಿಎಸ್ ಬರುವ ಗ್ಯಾರಂಟಿಯನ್ನು ಎಕ್ದಿಟ್ ಪೋಲ್ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment