Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ ; ವೇಮನಿ ಸತೀಶ್ 

Facebook
Twitter
Telegram
WhatsApp

             ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್,             ಮೊ : 87220 22817

ಚಿತ್ರದುರ್ಗ(ಸೆ. 03) : ಕ್ರೀಡೆ ಮಾನವನಿಗೆ ಅತಿ ಅಗತ್ಯವಾಗಿದೆ. ವ್ಯಾಯಾಮವನ್ನು ದಿನ ನಿತ್ಯ ಮಾಡುವುದರಿಂದ ಉತ್ತಮವಾದ ಆರೋಗ್ಯವನ್ನು ಪಡೆಯಬಹುದಾಗಿದೆ ಎಂದು ಆರ್.ಐ.ಡಿ.3160 ಡಿಸ್ಟಿಕ್ ಗೌರ್ನರ್ ವೇಮನಿ ಸತೀಶ್ ತಿಳಿಸಿದ್ದಾರೆ.

ನಗರದ ಒಳಾಂಗಣ ಕ್ರೀಡಾಂಗಣದಲ್ಲಿಂದು ರೋಟರಿ ಇಂಟರ್ ನ್ಯಾಷನಲ್ ಡಿಸ್ಟಿಕ್ 3160ವತಿಯಿಂದ ರೋಟರಿ ಕ್ಲಬ್ ಚಿನ್ಮೂಲಾದ್ರಿ ಜೋನ್‍ವತಿಯಿಂದ ಹಮ್ಮಿಕೊಂಡಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮವಾದ ಆರೋಗ್ಯವನ್ನು ಪಡೆಯಲು ಕ್ರೀಡೆ ಅತಿ ಮುಖ್ಯವಾಗಿದೆ. ಪ್ರತಿ ದಿನ ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದರು.

ಇಂದಿನ ದಿನಮಾನದಲ್ಲಿ ಬಹುತೇಕ ಮನೆಗಳಲ್ಲಿ 2 ಅಥವಾ 4 ಚಕ್ರದ ವಾಹನಗಳು ಇದ್ದೇ ಇರುತ್ತವೆ. ಇದನ್ನು ಉಪಯೋಗ ಮಾಡುವುದರಿಂದ ದೇಹದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಇದರ ನಿವಾರಣೆಗೆ ವ್ಯಾಯಾಮ ಮಾಡುವುದು ಅಗತ್ಯವಾಗಿದೆ. ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿ, ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಈಗ ಸೋತವರು ಮುಂದಿನ ಸಮಯದಲ್ಲಿ ಗೆಲವು ಸಾಧಿಸಲಿಕ್ಕೆ ಪ್ರಯತ್ನ ಮಾಡಿ ಸೂತೆ ಎಂದ ಕುಗ್ಗ ಬೇಡಿ ಗೆದ್ದವರು ಸಹಾ ಮುಂದಿನ ದಿನದಲ್ಲಿ ಮತ್ತಷ್ಟು ಗೆಲವು ಸಾಧಿಸಲಿಕೆ ಮುಂದಾಗಿ ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ರೋಟರಿಯನ್ ಮಾಧುರಿ ಮಧುಪ್ರಸಾದ್, ಚಿತ್ರದುರ್ಗ ಪೋರ್ಟನ ಮಧುಸೂಧನ್ ರೆಡ್ಡಿ, ಚಿನ್ಮೂಲಾದ್ರಿ ಅಧ್ಯಕ್ಷ ಅರುಣ್ ಕುಮಾರ್, ಫಸ್ಟ್ ಲೇಡಿ ಬಾನುಮಾತ, ಯುವಜನ ಸೇವಾ ಇಲಾಖೆಯ ಅಧಿಕಾರಿ ಶ್ರೀಮತಿ ಜಯಲಕ್ಷ್ಮೀ, ಚಿನ್ಮೂಲಾದ್ರಿ ಅಸಿಸ್ಟೆಂಟ್ ಗೌರ್ನರ್ ಶ್ರೀಮತಿ ಗಾಯತ್ರಿ ಶಿವರಾಂ ಮತ್ತು ವಿಶ್ವನಾಥ್ ಭಾಗವಹಿಸಿದ್ದರು.

ಈ ಕ್ರೀಡಾಕೂಟಕ್ಕೆ ಕರ್ನೂಲ್, ಆದ್ವಾನಿ, ನಂದ್ಯಾಲ, ಹೊಸಪೇಟೆ, ಬಳ್ಳಾರಿ, ಗುಲ್ಬರ್ಗ ಮತ್ತು ಚಿತ್ರದುರ್ಗದಿಂದ ರೋಟೇರಿಯನ್ ಕ್ರೀಡಾಪಟುಗಳು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!