Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶಾಲೆಯಲ್ಲಿನ ಶಿಕ್ಷಣಕ್ಕಿಂತಲೂ ಜೀವನದಲ್ಲಿನ ಅನುಭವ ಶ್ರೇಷ್ಟವಾದುದು : ಕೆ.ಎಂ.ವೀರೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ ಏ. 05 : ಶಾಲೆಯಲ್ಲಿನ ಶಿಕ್ಷಣಕ್ಕಿಂತಲೂ ಜೀವನದಲ್ಲಿನ ಅನುಭವ ಶ್ರೇಷ್ಟವಾದುದು ಎಂದು ಬಾಪೂಜಿ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯ, ಬಾಪೂಜಿ ಸಮೂಹ ಸಂಸ್ಥೆಗಳು, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದೊಂದಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಸಮೂಹ ಸಂಸ್ಥೆಗಳ ಕ್ಯಾಂಪಸ್‍ನಲ್ಲಿ ಪ್ರಶಿಕ್ಷಣಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಪೌರತ್ವ ತರಬೇತಿ ಶಿಬಿರ ಉದ್ಗಾಟಿಸಿ ಮಾತನಾಡಿದರು.

ವಿದ್ಯಾರ್ಥಿಯಿದ್ದಾಗ ಕಲಿಯುವ ಶಿಸ್ತು ಜೀವನವಿಡಿ ಇರಬೇಕು. ಪಾಠದ ಸಂದರ್ಭದಲ್ಲಿ ಪುಸ್ತಕ ಪೆನ್ನು ಬಹಳ ಮುಖ್ಯ. ಶಿಕ್ಷಣದ ಜೊತೆ ಸಂಸ್ಕಾರ, ಜ್ಞಾನ, ಬದುಕು ವೃದ್ದಿಯಾಗಬೇಕು. ಕುವೆಂಪು, ದ.ರಾ.ಬೇಂದ್ರೆ ಸೇರಿದಂತೆ ಅನೇಕ ಸಾಹಿತಿಗಳ ಕೊಡುಗೆ ನಾಡಿಗೆ ಅಪಾರವಾಗಿದೆ. ಪ್ರಕೃತಿ ನೀಡಿರುವ ನೈಸರ್ಗಿಕ ಸಂಪನ್ಮೂಲಗಳಾದ ಗಾಳಿ, ಬೆಳಕು, ನೀರನ್ನು ಸರಿಯಾಗಿ ಬಳಸಿಕೊಳ್ಳಬೇಕು. ಪೌರ ಪ್ರಜ್ಞೆ, ಪರಿಸರ ಪ್ರಜ್ಞೆ ಪ್ರತಿಯೊಬ್ಬರಲ್ಲಿಯೂ ಇರಬೇಕು. ಮೂರು ದಿನಗಳ ಕಾಲ ಪೌರತ್ವ ತರಬೇತಿ ಶಿಬಿರದಲ್ಲಿ ನೀವುಗಳು ಕಲಿಯುವುದನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಪ್ರಶಿಕ್ಷಣಾರ್ಥಿಗಳಿಗೆ ಕೆ.ಎಂ.ವೀರೇಶ್ ಕರೆ ನೀಡಿದರು.

ನಿವೃತ್ತ ಡಿ.ವೈ.ಎಸ್ಪಿ. ಸೈಯದ್ ಇಸಾಕ್ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ಆತ್ಮವಿಶ್ವಾಸವಿಲ್ಲದಿದ್ದರೆ ಜೀವನದಲ್ಲಿ ಏನನ್ನು ಸಾಧಿಸಲು ಆಗುವುದಿಲ್ಲ. ಕೇವಲ ಪರೀಕ್ಷೆ ಪದವಿಗಾಗಿ ಓದುವುದಕ್ಕಿಂತಲೂ ಹೆಚ್ಚಾಗಿ ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ, ಇನ್ನಿತರೆ ಸ್ಪರ್ಧಾತ್ಮಕ ಪುಸ್ತಕಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಿ. ವಾಸ್ತವಿಕತೆ, ಗಟ್ಟಿತನ ಇರಬೇಕು. ದೊಡ್ಡ ಸಾಹಿತಿಗಳು ಪುಸ್ತಕ ಓದಿ ಬುದ್ದಿವಂತರಾದವರಲ್ಲ. ಗ್ರಹಿಕೆಯಿಂದ ಜ್ಞಾನವಂತರಾಗಿದ್ದಾರೆಂದು ಪ್ರಶಿಕ್ಷಣಾರ್ಥಿಗಳಿಗೆ ತಿಳಿಸಿದರು.

 

ಭಾಷೆಯ ಮೇಲೆ ನಿರ್ಧಿಷ್ಠತೆ, ಪ್ರಖರತೆಯಿರಬೇಕು. ಜ್ಞಾನವೇ ನಿಜವಾದ ಭಂಡಾರ. ಇಂದಿನ ಮಕ್ಕಳು ತುಂಬಾ ಚುರುಕಾಗಿರುವುದರಿಂದ ಮೊದಲು ಶಿಕ್ಷಕರುಗಳು ಅಪ್ಡೇಟ್ ಆಗಿರಬೇಕು. ಇಲ್ಲದಿದ್ದರೆ ಮಕ್ಕಳ ಭವಿಷ್ಯ ರೂಪಿಸಲು ಆಗಲ್ಲ. ಮೂರು ದಿನಗಳ ಕಾಲ ನಡೆಯುವ ಪೌರತ್ವ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹೇಳಿಕೊಡುವ ವಿಚಾರಗಳನ್ನು ಗಮನವಿಟ್ಟು ಕೇಳಿ. ಶಿಕ್ಷಣದ ಜೊತೆ ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರ ಕಲಿಯಿರಿ. ಜೀವನಕ್ಕೆ ಹಾಸ್ಯವಿರಬೇಕು. ಗ್ರಹಿಕೆಗೆ ಆಲೋಚನೆ ಮುಖ್ಯ. ಸತ್ಯ ಒಪ್ಪಿಕೊಂಡು ಮುನ್ನುಗ್ಗಿ ಎಂದು ಹೇಳಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹಾಗೂ ಶಿಬಿರಾಧಿಕಾರಿ ಡಾ.ಹನುಮಂತರೆಡ್ಡಿ ಮಾತನಾಡುತ್ತ ಇತ್ತೀಚಿನ ದಿನಗಳಲ್ಲಿ ಶ್ರಮದಾನ ಎನ್ನುವುದೇ ಕಡಿಮೆಯಾಗುತ್ತಿದೆ. ಅದಕ್ಕಾಗಿ ಪ್ರಶಿಕ್ಷಣಾರ್ಥಿಗಳಿಗೆ ಮೂರು ದಿನಗಳ ಕಾಲ ಪೌರತ್ವ ಶಿಬಿರ ಹಮ್ಮಿಕೊಂಡಿದ್ದು, ಯೋಗ, ಧ್ಯಾನ, ಶ್ರಮದಾನ ಕುರಿತು ಹೇಳಿಕೊಡಲಾಗುವುದು. ಶಿಕ್ಷಣದ ಜೊತೆ ಸಮಾಜಮುಖಿಗಳಾಗಿ ಎಂದು ಪ್ರಶಿಕ್ಷಣಾರ್ಥಿಗಳಿಗೆ ಕರೆ ನೀಡಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ದಾವಣಗೆರೆ ವಿ.ವಿ.ಸಿಂಡಿಕೇಟ್ ಸದಸ್ಯೆ ಪ್ರೊ. ಎಂ.ಆರ್.ಜಯಲಕ್ಷ್ಮಿ, ಉಪ ಪ್ರಾಂಶುಪಾಲರಾದ ಪ್ರೊ. ಹೆಚ್.ಎನ್.ಶಿವಕುಮಾರ್ ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...

Enable Notifications OK No thanks