Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸದೆ ಮೇನಕಾ ಗಾಂಧಿಗೆ ತಿಳುವಳಿಕೆ ಹೇಳಿ : ಸಿಎಂ ಬೊಮ್ಮಾಯಿಗೆ ಪ್ರಜ್ವಲ್ ರೇವಣ್ಣ ಸಲಹೆ

Facebook
Twitter
Telegram
WhatsApp

 

ಹಾಸನ: ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆನೆದಂತ ಪ್ರಕರಣ ಇದೀಗ ರಾಷ್ಟ್ರಮಟ್ಟದಲ್ಲೂ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಸಂಸದೆ ಮೇನಕಾ ಗಾಂಧಿ. ಆನೆದಂತ ಕಳ್ಳತನ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಕೈವಾಡವಿದೆ ಎಂದು ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಆನೆದಂತ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿಗಳು ಪ್ರಜ್ವಲ್ ರೇವಣ್ಣ ಅವರ ಬೆಂಬಲಿಗರಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಈ ಆರೋಪಕ್ಕೆ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದು, ಅವರಿಗೆ ತಿಳುವಳಿಕೆ ಹೇಳಲು ಸಿಎಂಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠ ನಡೆಸಿ, ಆನೆದಂತ ಕಳ್ಳತನಕ್ಕೆ ಸಹಾಯ ಮಾಡಿದ್ದೇನೆ ಎಂದು ಆರೋಪಿಸಿದ್ದಾರೆ. ಮನೇಕಾ ಗಾಂಧಿ ಅವರು ಹಿರಿಯ ಸಂಸದರು, ಮಾಜಿ ಸಚಿವರು. ರಾಜ್ಯದಲ್ಲಿ ಅವರದ್ದೇ ಆದ ಸರ್ಕಾರ ಆಡಳಿತದಲ್ಲಿದೆ. ಪೂರ್ತಿ ಮಾಹಿತಿ ಪಡೆದು ಈ ಬಗ್ಗೆ ಮಾತನಾಡಬೇಕು. ಆನೆ ಸಾವನ್ನಪ್ಪಿರುವುದು ನನಗೆ ಗೊತ್ತಿಲ್ಲ. ನಾನು ಯಾವುದೇ ಅಧಿಕಾರಿಗೆ ಒತ್ತಡ ಹಾಕಿಲ್ಲ ಎಂದು ಹೇಳಿದ್ದಾರೆ.

 

ಆ ಆರೋಪಿಗಳಿಗೆ ನಾನೇ ಬೇಲ್ ಕೊಡಿಸಿದ್ದೇನೆ ಎಂದು ಆರೋಪಿಸಲಾಗಿದೆ. ಬೇಲ್ ಕೊಡಿಸಲು ಹೇಗೆ ಸಾಧ್ಯ‌ ಬೇಲ್ ಕೋರ್ಟ್ ನೀಡುತ್ತೆ. ಅದರಲ್ಲಿ ನನ್ನ ಪಾತ್ರವೇನಿದೆ. ದುಡ್ಡಿಗಾಗಿ ಜೆಸಿಬಿ ಡ್ರೈವರ್ ಆನೆ ದೇಹವನ್ನು ಹೂತಿದ್ದಾನೆ. ತಪ್ಪು ಮಾಡಿದವರಿಗೆ ಶಿಕ್ಷೆ ನೀಡಿ ಅಂತ ನಾನೇ ಹೇಳಿದ್ದೇನೆ. ನಾನೂ ಕೂಡ ಪ್ರಾಣಿ ಪ್ರಿಯ. ಇದರ ವಿರುದ್ಧವೇ ನಾನು ಇದ್ದೇನೆ. ನಾನು ಯಾವುದೇ ಅಧಿಕಾರಿಗೆ ಒತ್ತಡ ಹಾಕಿಲ್ಲ. ಸಾಕ್ಷಿ ಇದ್ದರೆ ಕೊಡಲಿ. ನಮ್ಮ ರಾಜ್ಯದ ಸಂಸದರ ಮೇಲೆ ಆರೋಪ ಮಾಡಿದ ಮೇಲೆ ಸಿಎಂ ಬೊಮ್ಮಾಯಿ ಅವರಿಗೆ ತಿಳುವಳಿಕೆ ಹೇಳಬೇಕಿತ್ತು. ಅವರಿಗೆ ಪತ್ರ ಬರೆಯಬೇಕು. ನಾನು ಬರೆಯುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!