ಸುಲಿಗೆ ಪ್ರಕರಣ: ಹೆಚ್ಡಿಕೆಗೆ ವಿರುದ್ಧ ನಾನ್ ಬೇಲಬಲ್ ಎಫ್ಐಆರ್ ದಾಖಲು : ಕುಮಾರಸ್ವಾಮಿ ಮುಂದಿನ ನಡೆ ಏನು..?

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ತಮ್ಮ ಪಕ್ಷದವರಿಂದಲೇ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಜೆಡಿಎಸ್ ಸೋಷಿಯಲ್ ಮೀಡಿಯಾ ಉಪಾಧ್ಯಕ್ಷರಾಗಿರುವ ವಿಜಯ್ ತಾತಾ ಈ ಸಂಬಂಧ ದೂರು ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಅವರು 50 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ದೂರು ನೀಡಲಾಗಿದೆ. ದೂರಿನ ಆಧಾರದ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಅದು ನಾನ್ ಬೇಲಬಲ್ ಸೆಕ್ಷನ್ ಅಡಿ ದೂರು ದಾಖಲಾಗಿದೆ.

ಬಿಎನ್​ಎಸ್ ಸೆಕ್ಷನ್ 3(5), 308(2), 351(2) ಅಡಿಯಲ್ಲಿ ದಾಖಲಾಗಿದೆ. 308 ಬಿಎನ್ಎಸ್ ಸೆಕ್ಷನ್​ ಅಂದ್ರೆ ಸುಲಿಗೆ ಆರೋಪ‌ ಪ್ರಕರಣವಾಗಿದೆ. ನಾನ್ ಬೇಲಬಲ್ ಕೇಸ್ ಆಗಿರುವ ಕಾರಣ, ಕುಮಾರಸ್ವಾಮಿ ಅವರನ್ನು ತಕ್ಷಣ ಅರೆಸ್ಟ್ ಮಾಡಲು ಬಹುದು. ಈ ಕೇಸ್ ಸುಮಾರು ಎರಡು ವರ್ಷಗಳ ಕಾಲ ಶಿಕ್ಷೆಯಾಗಲಿದೆ.

ಆದರೆ ಇನ್ನೊಂದು ಸೆಕ್ಷನ್ 3(5) ಇದು ಸಮಾನ ಉದ್ದೇಶ ಹೊಂದಿರುವ ಆರೋಪಿಗಳಿಗೆ ಸಂಬಂಧಿಸಿದ್ದಾಗಿದೆ‌. ಹೀಗಾಗಿ ತಕ್ಷಣವೇ ಅರೆಸ್ಟ್ ಮಾಡುವುದಕ್ಕೆ ಬರುವುದಿಲ್ಲ. ವಿಚಾರಣೆಗೆ ಏಳು ದಿನಗಳ ಕಾಲ ಅವಕಾಶ ನೀಡಬೇಕು. ಹಾಗೇ ನೋಟೋಸ್ ಗೂ ಬಾರದೆ ಇದ್ದಾಗ ಬಂಧನ ಮಾಡಬಹುದು. ನಾನ್ ಬೇಲಬಲ್ ಕೇಸ್ ಆಗಿರುವ ಕಾರಣ ಕೇಂದ್ರ ಸಚಿವ ಕುಮಾರಸ್ವಾಮಿ ಹೈಕೋರ್ಟ್ ಗೆ ಹೋಗುವ ಸಾಧ್ಯತೆ ಇದೆ. ಇನ್ನು ಇದಕ್ಕೆ ಸಂಬಂಧಿಸಿದಂತೆಯೇ ಫೋನ್ ಮೂಲಕ ಕುಮಾರಸ್ವಾಮಿ ಅವರು ಬೆದರಿಕೆ ಹಾಕಿರುವ ಆರೋಪವೂ ಇದೆ. ಕುಮಾರಸ್ವಾಮಿ ಯಾವ ರೀತಿಯಾಗಿ ಕಾನೂನು ಹೋರಾಟ ಮಾಡುತ್ತಾರೆಂದು ನೋಡಬೇಕಿದೆ.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳಲ್ಲಿ ತಮ್ಮ 51 ನೇ ಶತಕವನ್ನು ಗಳಿಸಿದರು. ಟೀಮ್ ಇಂಡಿಯಾ ಪಾಕಿಸ್ತಾನವನ್ನು 6…

5 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

30 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago