Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಇಲಾಖೆಗಳಲ್ಲಿ ಮೀತಿ ಮೀರಿದ ಭ್ರಷ್ಟಾಚಾರ : ಕೆಟಿ ತಿಪ್ಪೇಸ್ವಾಮಿ ಆರೋಪ

---Advertisement---

ಸುದ್ದಿಒನ್, ಹಿರಿಯೂರು, ನವೆಂಬರ್. 04 : ತಾಲ್ಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಮೀತಿ ಮೀರಿದ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಆರೋಪಿಸಿದರು.

ನಗರದ ರೈತ ಸಂಘದ ಕಛೇರಿಯಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಭ್ರಷ್ಟಾಚಾರದ ಬಗ್ಗೆ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಅಲ್ಲದೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ರೈತರ ಹೆಸರಿನಲ್ಲಿ ಪಿ ಎಂ ಸಿ ಕಂಪನಿ ಹಾಗೂ ಉಪಗುತ್ತಿಗೆದಾರರು ನಿಯಮ ಉಲ್ಲಂಘನೆ ಮಾಡಿ ಸರ್ಕಾರಕ್ಕೆ ನೂರಾರು ಕೋಟಿ ತೆರಿಗೆ ಕಟ್ಟದೆ ವಂಚಿಸುತ್ತಿರುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗು ಪತ್ರ ಬರೆದರು ಕ್ರಮ ವಹಿಸದೆ ಅಧಿಕಾರಿಗಳು ಕಂಪನಿಯೊಂದಿಗೆ ಶಾಮಿಲ್ ಆಗಿ ನಿರಂತರವಾಗಿ ಅಕ್ರಮ ನಡೆಯಲು ಶಾಮೀಲಾಗಿದ್ದಾರೆ ಎಂದು ತಿಳಿಸಿದರು.

ನ. 13ರಂದು ಭ್ರಷ್ಟಾಚಾರ ಅಧಿಕಾರಿಗಳ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದು, ಅಂದು, ಸಚಿವರು ಧರಣಿ ಸ್ಥಳಕ್ಕೆ ಬಂದರೆ ದಾಖಲೆ ಸಮೇತ ನೀಡಲಾಗುವುದು. ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾಮಗಾರಿ ನಡೆಸದೆ ಹಣ ಪಡೆದಿರುವ ಬಗ್ಗೆ ದಾಖಲೆಗಳನ್ನು ನೀಡುತ್ತೇವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳಾದ ಕಂದಾಯ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಇಂಧನ, ಅಬಕಾರಿ ಹಾಗೂ ಅರಣ್ಯ ಇಲಾಖೆಗಳ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ತಾಲೂಕಿನಲ್ಲಿ ನಿಜವಾದ ಫಲಾನುಭವಿಗಳಿಗೆ ಬಗರ್ ಹಕುಂ ಸಾಗುವಳಿ ಹಕ್ಕು ಪತ್ರ ಕೊಡದೆ ಭೂಗಳ್ಳರಿಗೆ, ರಾಜಕೀಯ ಮುಖಂಡರಿಗೆ ಅಧಿಕಾರಿಗಳು ಮಣೆ ಹಾಕುತ್ತಿದ್ದಾರೆ ಎಂದರು.

ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಜಲಾಶಯ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿದ್ದು, ಜವನಗೊಂಡನಹಳ್ಳಿ ಹಾಗೂ ಐಮಂಗಲ ಹೋಬಳಿ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಡಿಸೆಂಬರ್ 9/12/2024ರಂದು ಹಿರಿಯೂರು ಬಂದ್ ಹಮ್ಮಿಕೊಳ್ಳು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಪ್ಪೇಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ರೈತ ಮುಖಂಡ ಆಲೂರು ಸಿದ್ದರಾಮಣ್ಣ, ಅರಳಿಕೆರೆ ತಿಪ್ಪೇಸ್ವಾಮಿ, ಆರ್.ಕೆ.ಗೌಡ, ನಾಗರಾಜಪ್ಪ, ತಿಮ್ಮಾರೆಡ್ಡಿ, ರಂಗಸ್ವಾಮಿ, ಶಿವಣ್ಣ, ಜಯಣ್ಣ, ರಂಗಸ್ವಾಮಿ, ಜಯಣ್ಣ, ಬಾಷಾ, ಬಾಲಕೃಷ್ಣ, ರಾಮಣ್ಣ, ತಿಪ್ಪೇಸ್ವಾಮಿ, ರಾಮಕೃಷ್ಣ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...