Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹವಾಮಾನ ವೈಪರೀತ್ಯ ಎಫೆಕ್ಟ್: ಸಿದ್ದರಾಮಯ್ಯ ವಿಶೇಷ ವಿಮಾನ ಜೈಪುರದಲ್ಲಿ ಲ್ಯಾಂಡ್!

---Advertisement---

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರ ಪ್ರಯಾಣಕ್ಕೆ ಹವಾಮಾನ ವೈಪರೀತ್ಯ ಅಡ್ಡಿಯಾಗಿದೆ. ದೆಹಲಿಯಲ್ಲಿ ಉಂಟಾದ ಪ್ರತಿಕೂಲ ಹವಾಮಾನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವನ್ನು ಜೈಪುರಕ್ಕೆ ತಿರುಗಿಸಲಾಗಿದ್ದು, ಅಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ.

ರಾಜಕೀಯವಾಗಿ ಅತ್ಯಂತ ಮಹತ್ವದ ಈ ಪ್ರಯಾಣದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಕೂಡ ಜೊತೆಯಲ್ಲಿದ್ದರು. ಅವರೊಂದಿಗೆ ಸಚಿವರಾದ ಕೆ ಜೆ ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಸಹ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಸಿದ್ದರಾಮಯ್ಯ ರಾಜೀನಾಮೆ ಬಳಿಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಮಾತುಕತೆ ನಡೆಸಲು ದೆಹಲಿಗೆ ತೆರಳುತ್ತಿದ್ದರು ಎನ್ನಲಾಗಿದ್ದು, ನಾಯಕತ್ವ ಬದಲಾವಣೆ, ಹೊಸ ಸಚಿವ ಸಂಪುಟ ರಚನೆ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಬೇಕಿತ್ತು.

ಹವಾಮಾನ ವೈಪರೀತ್ಯದಿಂದ ವಿಮಾನ ಜೈಪುರದಲ್ಲಿ ತಾತ್ಕಾಲಿಕವಾಗಿ ಇಳಿದಿರುವುದರಿಂದ ದೆಹಲಿ ಸಭೆಗಳ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇತ್ತ ಮುಖ್ಯಮಂತ್ರಿ ಸ್ಥಾನಕ್ಕೆ ಡಿ ಕೆ ಶಿವಕುಮಾರ್ ಹೆಸರು ಬಹುತೇಕ ಅಂತಿಮವಾಗಿರುವ ಹಿನ್ನೆಲೆ, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸರಣಿ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now