Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೇತ್ರದಾನ ಜನಾಂದೋಲನ ಆಗಬೇಕು: ಸಚಿವ ಡಾ.ಕೆ.ಸುಧಾಕರ್

Facebook
Twitter
Telegram
WhatsApp

ಬೆಂಗಳೂರು : ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮಿಂಟೋ ಕಣ್ಣಾಸ್ಪತ್ರೆಯ 125 ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಸಚಿವರು, ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‍ಕುಮಾರ್ ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ತಂತ್ರಜ್ಞಾನ ವಿಶಿಷ್ಟವಾಗಿ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯವಾಗುತ್ತದೆ. ದೇಶದಲ್ಲಿ 3-4 ಕೋಟಿ ಜನರಿಗೆ ಅಂಧತ್ವ ಇದೆ. ಆದ್ದರಿಂದ ದಾನಿಗಳ ಸಂಖ್ಯೆ ಹೆಚ್ಚಬೇಕಿದೆ. ಮರಣ ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ನಾನು ಕೂಡ ಕಳೆದ ವರ್ಷವೇ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಕೋವಿಡ್ ಸಮಯದಲ್ಲಿ ಮಿಂಟೋ, ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡಲಾಗಿತ್ತು. ಆದರೆ ಈಗ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಧೈರ್ಯವಾಗಿ ಬಂದು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು ಎಂದರು.

ಅನೇಕ ವೈದ್ಯರು, ಶುಶ್ರೂಷಕರು, ವೈದ್ಯಕೀಯೇತರ ಸಿಬ್ಬಂದಿಯ ಶ್ರಮದಿಂದಾಗಿ ಮಿಂಟೋ ಕಣ್ಣಾಸ್ಪತ್ರೆಯು 125 ನೇ ವರ್ಷಕ್ಕೆ ಕಾಲಿಟ್ಟಿದೆ. ಇಂತಹ ಸಂಸ್ಥೆ ಇರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರ. 1896 ರಲ್ಲಿ ಡಿಸ್ಪೆನ್ಸರಿಯಾಗಿ ಆರಂಭವಾದ ಸಂಸ್ಥೆ 125 ವರ್ಷದವರೆಗೂ ಸೇವೆ ನೀಡಿದೆ. ಪ್ಲೇಗ್ ನಿಂದ ಆರಂಭವಾಗಿ ಇತ್ತೀಚೆಗೆ ಕೋವಿಡ್ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. ಇಂದು ಒಪಿಡಿಗೆ ಸುಮಾರು 800 ರೋಗಿಗಳು ಬರುತ್ತಿದ್ದಾರೆ. ವರ್ಷಕ್ಕೆ ಸುಮಾರು 10 ಸಾವಿರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!