Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಸಾರ್ವಜನಿಕರಿಗಾಗಿ ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

Facebook
Twitter
Telegram
WhatsApp

ಚಿತ್ರದುರ್ಗ, (ಏ.26) : ನಗರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಪ್ರಪ್ರಥಮ ಬಾರಿಗೆ ಸಾರ್ವಜನಿಕರಿಗಾಗಿ ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಆರ್ಯವೈಶ್ಯ ಸಂಘದ ಅಧ್ಯಕ್ಷರಾದ ಎಸ್.ಎನ್. ಕಾಶಿ ವಿಶ್ವನಾಥ ಶ್ರೇಷ್ಠಿ ಹಾಗೂ ತಜ್ಞ ವೈದ್ಯರಾದ ಕೆ. ಮುತ್ತುಕೃಷ್ಣನ್ ಉದ್ಘಾಟಿಸಿದರು.
ಸುಮಾರು 400 ಕ್ಕೂ ಹೆಚ್ಚು ಸಾರ್ವಜನಿಕರು ಕಣ್ಣಿನ ಹನಿಯನ್ನು ಹಾಕಿಸಿಕೊಂಡು ಸಂತಸವನ್ನು ವ್ಯಕ್ತಪಡಿಸಿದರು.

ಕ್ಲಬ್‍ನ ಅಧ್ಯಕ್ಷರಾದ ಕೆ. ಸೋಮನಾಥ ಶೆಟ್ಟಿ, ಕಾರ್ಯದರ್ಶಿಗಳಾದ ಡಿ.ಆರ್. ವೇಣುಗೋಪಾಲ್ ಶೆಟ್ಟಿ, ಖಜಾಂಚಿಗಳಾದ ಪಿ.ಎಸ್. ಕೋಟೇಶ್ವರ ಗುಪ್ತ, ಕಾರ್ಯಕ್ರಮದ ಸಂಚಾಲಕರಾದ ಎ.ಆರ್. ಲಕ್ಷ್ಮಣ್, ಕೆ.ಆರ್. ರಮೇಶ್, ಎ. ಮಂಜುನಾಥ್, ಕೆ.ಎಂ. ಶ್ರೀನಿವಾಸ್ ಹಾಗೂ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್‍ನ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಿದ್ಧ ಕಣ್ಣಿನ ಹನಿ ಹಾಕುವ ಕಾರ್ಯಕ್ರಮವನ್ನು ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಪ್ರತಿ ತಿಂಗಳ 25ನೇ ತಾರೀಖಿನಂದು ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!