ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಸಾರ್ವಜನಿಕರಿಗಾಗಿ ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

suddionenews
1 Min Read

ಚಿತ್ರದುರ್ಗ, (ಏ.26) : ನಗರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಪ್ರಪ್ರಥಮ ಬಾರಿಗೆ ಸಾರ್ವಜನಿಕರಿಗಾಗಿ ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಆರ್ಯವೈಶ್ಯ ಸಂಘದ ಅಧ್ಯಕ್ಷರಾದ ಎಸ್.ಎನ್. ಕಾಶಿ ವಿಶ್ವನಾಥ ಶ್ರೇಷ್ಠಿ ಹಾಗೂ ತಜ್ಞ ವೈದ್ಯರಾದ ಕೆ. ಮುತ್ತುಕೃಷ್ಣನ್ ಉದ್ಘಾಟಿಸಿದರು.
ಸುಮಾರು 400 ಕ್ಕೂ ಹೆಚ್ಚು ಸಾರ್ವಜನಿಕರು ಕಣ್ಣಿನ ಹನಿಯನ್ನು ಹಾಕಿಸಿಕೊಂಡು ಸಂತಸವನ್ನು ವ್ಯಕ್ತಪಡಿಸಿದರು.

ಕ್ಲಬ್‍ನ ಅಧ್ಯಕ್ಷರಾದ ಕೆ. ಸೋಮನಾಥ ಶೆಟ್ಟಿ, ಕಾರ್ಯದರ್ಶಿಗಳಾದ ಡಿ.ಆರ್. ವೇಣುಗೋಪಾಲ್ ಶೆಟ್ಟಿ, ಖಜಾಂಚಿಗಳಾದ ಪಿ.ಎಸ್. ಕೋಟೇಶ್ವರ ಗುಪ್ತ, ಕಾರ್ಯಕ್ರಮದ ಸಂಚಾಲಕರಾದ ಎ.ಆರ್. ಲಕ್ಷ್ಮಣ್, ಕೆ.ಆರ್. ರಮೇಶ್, ಎ. ಮಂಜುನಾಥ್, ಕೆ.ಎಂ. ಶ್ರೀನಿವಾಸ್ ಹಾಗೂ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್‍ನ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಿದ್ಧ ಕಣ್ಣಿನ ಹನಿ ಹಾಕುವ ಕಾರ್ಯಕ್ರಮವನ್ನು ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಪ್ರತಿ ತಿಂಗಳ 25ನೇ ತಾರೀಖಿನಂದು ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *