Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಬೊಮ್ಮಾಯಿ ಅವರಿಗೆ ಮಂಡಿ ನೋವಿನ ಚಿಕಿತ್ಸೆ ನೀಡಿದ್ದವ ನಕಲಿ ವೈದ್ಯ..!

Facebook
Twitter
Telegram
WhatsApp

 

ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬ ವಿಚಾರ ಎಲ್ಲರಿಗೂ ಗೊತ್ತು. ಈ ಮಂಡಿನೋವಿನ ಚಿಕಿತ್ಸೆಗೆ ಅಮೆರಿಕಾಗೆ ತೆರಳುತ್ತಾರೆ. ಹೀಗಾಗಿಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ ಅನ್ನೋ ಊಹಾಪೋಹಗಳು ಸಹ ಹರಿದಾಡೋದಕ್ಕೆ ಶುರು ಮಾಡಿದ್ದವು. ಆದ್ರೆ ಚಿಕಿತ್ಸೆಗೆಂದು ಅಮೆರಿಕಾಗೆ ಹೋಗುವ ಬದಲು ಸಿಎಂ ನಾಟಿ ವೈದ್ಯರ ಮೊರೆ ಹೋಗಿದ್ದಾರೆ.

ಆ ನಾಟಿ ವೈದ್ಯ ನಿಜವಾದ ವೈದ್ಯನಲ್ಲ ಎಂದೇ ಹೇಳಲಾಗುತ್ತಿದೆ. ಆತನ ಬಗ್ಗೆ 2019ರಲ್ಲೇ ಕೇಸ್ ಕೂಡ ದಾಖಲಾಗಿದೆ ಎನ್ನಲಾಗಿದೆ. ಸದ್ಯ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಚಿಕಿತ್ಸೆ ಪಡೆಯುತ್ತಿರುವ ವೈದ್ಯನ ಹೆಸರು ಲೋಕೇಶ್ ಟೇಕಲ್ ಎಂದು.

ಈ ಲೋಕೇಶ್ ಈ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಆಸ್ಪತ್ರೆಯೊಂದನ್ನ ತೆರೆದಿದ್ದರು. ಇದು ಆಸ್ಪತ್ರೆ ಕಂ ಕ್ಲಿನಿಕ್ ಆಗಿತ್ತು. 2019ರಲ್ಲಿ ಈ ಕ್ಲಿನಿಕ್ ಮೇಲೆ ಅಂದಿನ ಆಯುಷ್ ಅಧಿಕಾರಿಯಾಗಿದ್ದ ಸುಜಾತ ಪಾಟೀಲ ದಾಳಿ ಮಾಡಿದ್ದರು. ಈ ವೇಳೆ ವೈದ್ಯರೆನಿಸಿಕೊಂಡಿದ್ದಂತ ಲೋಕೇಶ್ ಬಳಿ ತೋರಿಸಲು ದಾಖಲೆಗಳೆ ಇರಲಿಲ್ಲ.

ಆಯುಷ್ಯ ಮಂಡಳಿಯಲ್ಲಿ ಯಾವುದೇ ನೋಂದಣಿ ಮಾಡಿಸದೆಯೇ ವೃತ್ತಿ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಅಧಿಕಾರಿ ಸುಜಾತ ಅವರು ಮುಳುಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಲೋಕೇಶ್ ಟೇಕಲ್ ಮೇಲೆ ಎಫ್ಐಆರ್ ಕೂಡ ದಾಖಲಾಗಿತ್ತು. ಎಫ್ಐಆರ್ ರದ್ದು ಕೋರಿ ಲೋಕೇಶ್ ಕೋರ್ಟ್ ಮೊರೆ ಹೋಗಿದ್ದರು. ಇದೇ ವರ್ಷದ ನವೆಂಬರ್ ನಲ್ಲಿ ಎಫ್ಐಆರ್ ರದ್ದಾಗಿದೆ. ಇನ್ನು ಈ ಲೋಕೇಶ್ ಬಳಿ ಸಚಿವರು, ಶಾಸಕರು, ಮಠಾಧೀಶರು ಚಿಕಿತ್ಸೆಗೆಂದು ಹೋಗ್ತಾರೆ. ಇದೀಗ ಸಿಎಂ ಬೊಮ್ಮಾಯಿ ಕೂಡ ಇವರ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!