Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಅಂತೆ ಕಂತೆ ಸುದ್ದಿ ಸುಳ್ಳು : ರೇಣುಕಾಸ್ವಾಮಿ ತಂದೆ‌ ಸ್ಪಷ್ಟನೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 16 : ಫೇಸ್‍ಬುಕ್‍ನಲ್ಲಿ ಕೆಲವು ಅಂತೆ ಕಂತೆ ವಿಚಾರಗಳು ಹರಡುತ್ತಿರುವುದು ನಮ್ಮ ಮನಸ್ಸಿಗೆ ನೋವುಂಟಾಗಿದೆ ಎಂದು ದರ್ಶನ್ ಗ್ಯಾಂಗ್‍ನಿಂದ ಕೊಲೆಗೀಡಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು ದುಃಖ ತೋಡಿಕೊಂಡರು.

ತುರುವನೂರು ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ನಾವು ನಟ ದರ್ಶನ್ ಮನೆಗೆ ಹೋಗಿದ್ದೆವು. ದರ್ಶನ್ ನಮ್ಮ ಮನೆಗೆ ಬಂದಿದ್ದ ಎಂಬ ಸುದ್ದಿ ಫೇಸ್‍ಬುಕ್‍ನಲ್ಲಿ ಕೆಲವರು ಹರಡುತ್ತ ನಮ್ಮ ಕುಟುಂಬವನ್ನು ಕೆದಕಿ ನೋವುಂಟು ಮಾಡುತ್ತಿದ್ದಾರೆ.

ನಾವು ಯಾರನ್ನು ಭೇಟಿಯಾಗಿಲ್ಲ. ಹೊಸ ಕಾರ್ ಬುಕ್ ಮಾಡಿದ್ದೇವೆಂಬ ವಿಚಾರಗಳು ಸುಳಿದಾಡುತ್ತಿವೆ. ಮಗನನ್ನು ಕಳೆದುಕೊಂಡಿರುವ ನಾವುಗಳು ಕಾರ್ ತೆಗೆದುಕೊಂಡು ಏನು ಮಾಡುವುದು.

ನಮ್ಮ ಸೊಸೆಗೆ ನೌಕರಿ ನೀಡಿ ಎಂದು ಸರ್ಕಾರವನ್ನು ಕೇಳಿದ್ದೇವೆ. ನೌಕರಿ ಕೊಡಲು ಬರುವುದಿಲ್ಲವೆಂದು ಸರ್ಕಾರದ ಕಡೆಯಿಂದ ನಮಗೆ ಉತ್ತರ ಬಂದಿದೆ. ಒಂದು ವೇಳೆ ಸರ್ಕಾರ ನೌಕರಿ ಕೊಡದಿದ್ದರೆ ರೇಣುಕಾಸ್ವಾಮಿ ಪತ್ನಿ ಹಾಗೂ ಮಗು ಬೀದಿ ಪಾಲಾಗುತ್ತಾರೆ. ನಮ್ಮ ಮನವಿಯನ್ನು ಸರ್ಕಾರ ಪುನರ್ ಪರಿಶೀಲಿಸಿ ಸರ್ಕಾರಿ ನೌಕರಿ ಕೊಡುವಂತೆ ಕಾಶಿನಾಥ ಶಿವನಗೌಡ್ರು ಮನವಿ ಮಾಡಿದರು.

ರೇಣುಕಾಸ್ವಾಮಿ ಚಿಕ್ಕಪ್ಪ ಎಸ್.ಷಡಾಕ್ಷರಯ್ಯ ಮಾತನಾಡಿ ಫೇಸ್‍ಬುಕ್‍ನಲ್ಲಿ ಎಲ್ಲೆಡೆ ಹರಡುತ್ತಿರುವ ಫೇಕ್ ಸುದ್ದಿಯಿಂದ ನಮ್ಮ ಮನಸ್ಸಿಗೆ ನೋವಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಾಕಷ್ಟು ಒಳ್ಳೆ ಕೆಲಸ ಮಾಡಿರುವುದು ಸಮಾಧಾನ ತಂದಿದೆ. ಟ್ರಯಲ್ ಕೋರ್ಟ್‍ನಿಂದ ಫಾಸ್ಟ್ ಟ್ರಾಕ್‍ಗೆ ವರ್ಗಾಯಿಸಿ ಕೊಲೆ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕೆಂದು ಕೇಳಿದ್ದೇವೆ. ಅವಕಾಶವಿಲ್ಲವೆಂದು ಸರ್ಕಾರ ಹೇಳಿದೆ. ನಮ್ಮ ಮನವಿಯನ್ನು ಪುನರ್ ಪರಿಶೀಲಿಸಿ ನೌಕರಿ ಕೊಡುವಂತೆ ವಿನಂತಿಸಿದರು. ರೇಣುಕಾಸ್ವಾಮಿ ತಾಯಿ ಪತ್ರಿಕಾಗೋಷ್ಠಿಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...