Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಕಸ್ಮಿಕವಾಗಿ ಬೆಂಕಿ ಬಿದ್ದ ಹಿನ್ನೆಲೆ ಮನೆಯಲ್ಲಿದ್ದ 6 ಜನ ಸಜೀವ ದಹನ..!

Facebook
Twitter
Telegram
WhatsApp

ಕುಟುಂಬಸ್ಥರೆಲ್ಲಾ ರಾತ್ರಿ ಸಂತೃಪ್ತಿಯಾಗಿ ಊಟ ಮಾಡಿ, ಮಲಗಿದ್ದರು. ಆದರೆ ಆ ರಾತ್ರಿಯೇ ಕೊನೆ ರಾತ್ರಿ ಎಂದು ಯಾರು ಕೂಡ ಊಹೆ ಮಾಡಿರಲಿಲ್ಲ. ಅಂತದ್ದೊಂದು ಘಟನೆ ನಡೆದು ಕುಟುಂಬದ 6 ಜನ ರಾತ್ರೋ ರಾತ್ರಿಯೇ ಸುಟ್ಟು, ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಮಂದಮರೆ ನಗರದ ವೆಂಕಟಪುರ ಗ್ರಾಮದಲ್ಲಿ ನಡೆದಿದೆ.

ಶಿವಯ್ಯ, ಅವರ ಪತ್ನಿ ಪದ್ಮಾ, ಮತ್ತು ಇಬ್ಬರು ಹೆಣ್ಣು ಮಕ್ಕಳು ಹಾಗೂ ಸಹೋದರಿಯ ಮಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. ರಾತ್ರಿ 12 ಗಂಟೆ ಸುಮಾರಿಗೆ ಇದ್ದಕ್ಕಿದ್ದ ಹಾಗೇ ಮನೆಗೆ ಬೆಂಕಿ ಬಿದ್ದಿದೆ. ನೋಡ ನೋಡುತ್ತಿದ್ದಂತೆ ಮನೆಯಲ್ಲಿ ಬೆಂಕಿ ಜೋರಾಗಿ ಹೊತ್ತು ಉರಿದಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಬರುವಷ್ಟರಲ್ಲಿ ಮನೆಯಲ್ಲಿದ್ದವರೆಲ್ಲಾ ಸಜೀವ ದಹನವಾಗಿದ್ದಾರೆ.

ಶಿವಯ್ಯ ಅವರ ಸಹೋದರಿಗೆ ಸಾವು ಎಂಬುದು ಕೂಗಿ ಕೂಗಿ ಕರೆದಿತ್ತು ಎನಿಸುತ್ತದೆ. ಕಳೆದ ಎರಡು ದಿನಗಳ ಹಿಂದಷ್ಟೇ ಅಣ್ಣನ ಮನೆಗೆ ಬಂದಿದ್ದರು. ಆದರೆ ವಿಧಿ ಅವರನ್ನು ಸೇರಿಸಿ ಕರೆದುಕೊಂಡು ಹೋಗಿದೆ. ಬೆಂಕಿಯಲ್ಲಿ ಸೋದರಿ ಹಾಗೂ ಸೋದರಿಯ ಮಗಳು ಕೂಡ ಸುಟ್ಟು ಭಸ್ಮವಾಗಿದ್ದಾಳೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!