ಸುದ್ದಿಒನ್, ಚಿತ್ರದುರ್ಗ, ಮಾರ್ಚ್.08 : ನಗರದ ಕೆಳಗೋಟೆ, ಚರ್ಚ್ ಬಡಾವಣೆ ನಿವಾಸಿ ದಾಸಯ್ಯನ ಮಾಳಗೆ ಎಂ. ಮಹೇಶ್ವರಪ್ಪ (88) ಶುಕ್ರವಾರ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಹಿರಿಯೂರು ತಾಲ್ಲೂಕು ಐಮಂಗಳ ಹೋಬಳಿಯ ದಾಸಯ್ಯನ ಮಾಳಿಗೆಯಲ್ಲಿರುವ ಜಮೀನಿನಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ನೆರವೇರಲಿದೆ ಎಂದು ವಕೀಲರಾದ ಎಂ. ಸುರೇಶ್ ತಿಳಿಸಿದ್ದಾರೆ.
ಅಂತಿಮ ದರ್ಶನ : ಚಿತ್ರದುರ್ಗ ನಗರದ ಕೆಳಗೋಟೆ, ಚರ್ಚ್ ಬಡಾವಣೆಯ 4 ನೇ ಕ್ರಾಸ್ ನಲ್ಲಿರುವ ಸ್ವಗೃಹದಲ್ಲಿ ಮಾರ್ಚ್ 9 ರಂದು ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಂತಿಮ ನಮನ : ಹಿರಿಯ ವಕೀಲ ಎಂ. ಮಹೇಶ್ವರಪ್ಪ ಇವರ ನಿಧನದಿಂದ ಅಪಾರ ನೋವು ಅಘಾತ ಉಂಟಾಗಿದೆ ಎಂದು ಮೃತರ ಆತ್ಮೀಯ ಸ್ನೇಹಿತರು ಹಾಗೂ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎನ್.ಜಿ ಕೃಷ್ಣಮೂರ್ತಿ, ಎಂ. ಸುರೇಶ್ ಇವರು ತಿಳಿಸಿ, ಅಂತಿಮ ದರ್ಶನ ಪಡೆದು ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸುತ್ತಾರೆ.…