Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಹೇಳಿದ ಮಾತಿಗೆ ಫಿದಾ ಆದ ಫ್ಯಾನ್ಸ್

---Advertisement---

 

ಕಾಟೇರ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಅಬ್ಬರಿಸುತ್ತಾ ಇದೆ. ರಿಲೀಸ್ ಆಗಿ ಐದು ದಿನಕ್ಕೆ ಬಾಕ್ಸ್ ಆಫೀಸ್ ನಡುಗುತ್ತಿದೆ. ಮೊದಲೇ ಬಾಕ್ಸ್ ಆಫೀಸ್ ಸುಲ್ತಾನ ದರ್ಶನ್.  ಅದರಲ್ಲೂ ತರುಣ್ ಸುಧೀರ್ ಕಾಂಬಿನೇಷನ್ ಬೇರೆ. ಸಿನಿಮಾದ ನಿರೀಕ್ಷೆಯನ್ನ ಕೇಳಬೇಕೆ. ಮೊದಲ ಎರಡು ದಿನ ಫ್ಯಾನ್ಸ್ ಮುಗಿಬಿದ್ದು ಸಿನಿಮಾ ನೋಡಿದ್ದಾರೆ. ಈ ಮೂರು ದಿನದಿಂದ ಸಿನಿಮಾ ಅಭಿಮಾನಿಗಳು ಟಿಕೆಟ್ ಗಾಗಿ ಕ್ಯೂ ನಿಂತಿದ್ದಾರೆ. ದರ್ಶನ್ ಹಾಗೂ ತರುಣ್ ಸುಧೀರ್ ಕಾಂಬಿನೇಷನ್ ಮತ್ತೆ ಕ್ಲಿಕ್ ಆಗಿದೆ. ಈ ಸಕ್ಸಸ್ ಸಂತಸವನ್ನು ದರ್ಶನ್ ಅಂಡ್ ಟೀಂ ಎಲ್ಲರ ಜೊತೆಗೂ ಹಂಚಿಕೊಂಡಿದೆ. ಈ ವೇಳೆ ದರ್ಶನ್ ಆಡಿದಂತ ಒಂದೊಂದು ಮಾತು ಫ್ಯಾನ್ಸ್ ಗೆ ಸ್ಪೂರ್ತಿಯಾಗಿದೆ.

ದರ್ಶನ್, ತರುಣ್ ಸುಧೀರ್ ಬಗ್ಗೆಯೂ ಹೊಗಳಿದ್ದಾರೆ. ತರುಣ್ ಗೆ ನಂಗೆ ಏನು ಬೇಕು ಎಂಬುದು ಚೆನ್ನಾಗಿ ಗೊತ್ತು. ನಾನು ಯಾವ ಥರದ ಶರ್ಟ್ ಹಾಕಿದರೆ ಚೆನ್ನಾಗಿ ಕಾಣಿಸುತ್ತೀನಿ ಅನ್ನೋದು ಕೂಡ ಚೆನ್ನಾಗಿಯೇ ಗೊತ್ತು. ಎಲ್ಲಿ ಉದ್ದ ಬೇಕು, ಎಲ್ಲಿ ತುಂಡ ಬೇಕು ಎಂಬುದನ್ನು ಚೆನ್ನಾಗಿಯೇ ಅರಿತಿದ್ದಾರೆ ಎಂದಿದ್ದಾರೆ.

ಇದೇ ವೇಳೆ ಅಣ್ಣಾವ್ರನ್ನು ನೆನೆದಿದ್ದಾರೆ. ಕಾಟೇರ ಸಿನಿಮಾದಲ್ಲಿನ ಕಥೆ ಮತ್ತು ದರ್ಶನ್ ನಟನೆಯನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಡಾ.ರಾಜ್‌ಕುಮಾರ್ ಅವರನ್ನ ಹೋಲಿಸಿ ದರ್ಶನ್ ನಟನೆಯನ್ನು ಹೊಗಳಿದ್ದಾರೆ. ಹೀಗಾಗಿ ಡಾ.ರಾಜ್‌ಕುಮಾರ್ ಅವರ ಹೆಸರಲ್ಲ. ಅವರ ಕಾಲು ಧೂಳಿಗೂ ನಾವು ಸಮ ಅಲ್ಲ. ದಯವಿಟ್ಟು ಈ ವಿಚಾರವನ್ನು ಅಲ್ಲಿ ತನಕ ಎತ್ತುಕೊಂಡು ಹೋಗಲೇಬೇಡಿ. ನಾವು ಪ್ರಯತ್ನ ಮಾಡಬಹುದು. ಆದರೆ 000.1% ನಾವು ಅವರ ನಟನೆಗೆ ರೀಚ್ ಆಗೋಕೆ ಸಾಧ್ಯನೇ ಇಲ್ಲ ಎಂದು ಹೆಮ್ಮೆಯಿಂದ ಮಾತನಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment