Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಹುಟ್ಟುಹಬ್ಬಕ್ಕೆ ವಾರಗಳ ಮೊದಲೇ ಮನೆ ಮುಂದೆ ಕ್ಯೂ ನಿಂತ ಅಭಿಮಾನಿಗಳು..!

Facebook
Twitter
Telegram
WhatsApp

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದ್ರೆನೇ ಕ್ರೇಜ್. ಸಿಕ್ಕಾಪಟ್ಟೆ ಅಭಿಮಾನಿಗಳನ್ನು ಹೊಂದಿರುವ ನಟ. ದರ್ಶನ್ ಅವರ ಹುಟ್ಟುಹಬ್ಬ ಬಂತು ಅಂದ್ರೆ ಸಾಕು, ಅಭಿಮಾನಿಗಳು ಅವರ ಮನೆ ಮುಂದೆ ಕ್ಯೂ ನಿಂತಿರುತ್ತಾರೆ. ತಿಂಗಳಿಗೆ ಮುನ್ನವೇ ಸೆಲೆಬ್ರೇಷನ್ ವೆ ಪ್ರಿಪರೇಷನ್ ಮಾಡಿಕೊಳ್ಳುತ್ತಾರೆ. ಇದೀಗ ಮತ್ತೆ ಹುಟ್ಟುಹಬ್ಬದ ಸಂಭ್ರಮ ಹತ್ತಿರವಿದೆ.

ಮಾಮೂಲಿಯಂತೆ ದರ್ಶನ್, ತನ್ನ ಸೆಲೆಬ್ರೆಟಿಗಳ ಬಳಿ ಹುಟ್ಟುಹಬ್ಬವನ್ನು ಸಾರ್ಥಕವಾಗಿ ಆಚರಿಸುವಂತೆ ಮನವಿ ಮಾಡಿದ್ದಾರೆ. ಕೇಕು, ಹಾರ ಎಂದು ಹಣ ವ್ಯರ್ಥ ಮಾಡುವ ಬದಲು, ಸಾರ್ಥಕವಾಗುವಂತ ಕೆಲಸ ಮಾಡಲು ತಿಳಿಸಿದ್ದಾರೆ. ಅದೇ ಹಣಕ್ಕೆ ದವಸ ಧಾನ್ಯಗಳನ್ನು ತರಲು ಸೂಚನೆ ನೀಡಿದ್ದಾರೆ. ಫೆಬ್ರವರಿ 16ಕ್ಕೆ ಹುಟ್ಟುಹಬ್ಬವಿದೆ. ಆದರೆ ವಾರವಿರುವಾಗಲೇ ದರ್ಶನ್ ಅವರ ಹುಟ್ಟುಹಬ್ಬ ಶುರುವಾಗಿದೆ.

ದರ್ಶನ್ ಅವರ ಮನೆ ಮುಂದೆ ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದಾರೆ. ದರ್ಶನ್ ಅವು ಮೊದಲೇ ಹೇಳಿದಂತೆ ದವಸ-ಧಾನ್ಯಗಳನ್ನು ತಂದುಕೊಡುವ ಕೆಲಸಗಳು ನಡೆಯುತ್ತಿವೆ. ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ನಿವಾಸ ಬಳಿ ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದಾರೆ. ಬೆಳಗ್ಗೆಯಿಂದಾನೇ ಫ್ಯಾನ್ಸ್ ನಟನನ್ನು ನೋಡಲು ಕಾಯುತ್ತಿದ್ದಾರೆ.

 

ಫೆಬ್ರವರಿ 16ಕ್ಕೆ ದರ್ಶನ್ ಅವರು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಅಂದು ತಮ್ಮ ಸೆಲೆಬ್ರೆಟಿಗಳ ನಡುವೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಫ್ಯಾನ್ಸ್ ಕೂಡ ಅಂದಿನ ದಿನಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಕಾಮನ್ ಡಿಪಿ ರಿಲೀಸ್ ಸಿದ್ಧ ಮಾಡಿದ್ದಾರೆ. ಅಂದು ದರ್ಶನ್ ಅವರ ಡೆವಿಲ್ ಸಿನಿಮಾದ ಅಪ್ಡೇಟ್ ಕೂಡ ಸಿಗಬಹುದು ಎಂಬ ನಿರೀಕ್ಷೆ ಇದೆ. ಕಾಟೇರ ಸಕ್ಸಸ್ ನಡುವೆ ಯಾವೆಲ್ಲಾ ಶುಭ ಸುದ್ದಿ ಕೊಡಬಹುದು ಎಂಬ ಕಾತುರತೆ ಫ್ಯಾನ್ಸ್ ಗಳಲ್ಲಿ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!