Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಪ್ಪಳದಲ್ಲಿಯೇ ನಿಲ್ಲಲು ಮತ್ತೆ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳ ಒತ್ತಡ..!

Facebook
Twitter
Telegram
WhatsApp

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈಗಾಗಲೆ ಪಕ್ಷಗಳು ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿರುವಾಗಲೇ ಮತ್ತೆ ಎಲ್ಲರ ಗಮನ ಹೋಗಿರುವುದು ಸಿದ್ದರಾಮಯ್ಯ ಕಡೆಗೆ. ಈ ಬಾರಿ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬುದು.

ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆಯೇ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅವರಿಗಾಗಿ ಕ್ಷೇತ್ರ ಬಿಟ್ಟುಕೊಡಲು ಸಾಕಷ್ಟು ಬೆಂಬಲಿಗರು ಸಿದ್ಧವಾಗಿದ್ದಾರೆ. ಆದರೆ ಅವರ ಒಲವಿರುವುದು ಮಾತ್ರ ಬಾದಾಮಿ ಕ್ಷೇತ್ರದ ಮೇಲೆ. ಹೀಗಾಗಿ ಸಿದ್ದರಾಮಯ್ಯ ಅವರ ಸ್ಪರ್ದೆ ಎಲ್ಲಿ ಎಂಬುದೇ ಎಲ್ಲರ ಚರ್ಚೆಯಾಗಿದೆ. ಇನ್ನು ಕೊಪ್ಪಳದಿಂದ ಸ್ಪರ್ಧೆ ಮಾಡುವುದಕ್ಕೂ ಒತ್ತಡ ಹಾಕಲಾಗುತ್ತಿದೆ. ಈ ಮುಂಚೆ ಕೂಡ ಒಮ್ಮೆ ಕರೆಯಲಾಗಿತ್ತು. ಇದೀಗ ಮತ್ತೊಮ್ಮೆ ಕೊಪ್ಪಳದಿಂದಲೇ ಸ್ಪರ್ಧೆಗೆ ಆಹ್ವಾನ ಬಂದಿದೆ. ಹೀಗಾಗಿ ಬಾದಾಮಿಯ ಆಸೆ ಬಿಟ್ಟು ಸಿದ್ದರಾಮಯ್ಯ ಅವರು ಕೊಪ್ಪಳದಲ್ಲಿ ನಿಲ್ಲುತ್ತಾರಾ ಎಂಬ ಪ್ರಶ್ನೆ ಎದ್ದಿವೆ.

ಸಿದ್ದರಾಮಯ್ಯ ಅವರ ಆಪ್ತರಾಗಿರುವ ಕುಷ್ಟಗಿ ಶಾಸಕ ಅಮರೇಗೌಡ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಮೊದಲು ಕ್ಷೇತ್ರದ ಹುಡುಕಾಟ ಬಿಡಿ, ಕೊಪ್ಪಳಕ್ಕೆ ಬಂದುಬಿಡಿ ಎಂದಿದ್ದಾರಂತೆ. ಯಾಕೆಂದರೆ ಈ ಹಿಂದೆ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರಿಗೆ ಕುಷ್ಟಗಿಯಿಂದ ಹೆಚ್ಚು ಮತಗಳು ಬಂದಿದ್ದವು. ಹೀಗಾಗಿ ಮತ್ತೆ ಕೊಪ್ಪಳದಿಂದಲೇ ಸ್ಪರ್ಧೆಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!