Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಲ ಭಾದೆ ರೈತ ಆತ್ಮಹತ್ಯೆ

---Advertisement---

ಬಳ್ಳಾರಿ, ಕುರುಗೋಡು : ಸಾಲ ಭಾದೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಜರುಗಿದೆ.ಸಮೀಪದ ಬಾದನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಾದನಹಟ್ಟಿ ಗ್ರಾಮದ ಪೋತಪ್ಪನ ಕಟ್ಟೆ 4ನೇ ವಾರ್ಡಿನ ನಿವಾಸಿ ಬಸಾಪುರ ಪೆನ್ನಯ್ಯ ವಾಲ್ಮೀಕಿ ಸಮುದಾಯ (35) ವರ್ಷ ಮೃತ ದುರ್ದೈವಿ ಈತನಿಗೆ ಪತ್ನಿ ಸೇರಿ ಐದು ಜನ ಪುತ್ರಿಯರು ಹಾಗೂ ಒಬ್ಬ ಪುತ್ರನು ಇದ್ದಾನೆ.

ಬಸಾಪುರ ಪೆನ್ನಯ್ಯ ತನ್ನ 3 ಎಕರೆ ಜಮೀನು ನಲ್ಲಿ ಮೆಣಿಸಿನಕಾಯಿ ಬೆಳೆ ಬಿತ್ತನೆ ಮಾಡಿ ವ್ಯವಸಾಯ ಮಾಡಿಕೊಂಡು ಹೋಗುತಿದ್ದ, ಮಳೆ ಇಲ್ಲದೆ, ಬೆಳೆಗೆ ನೀರು ಸಿಗದೆ ಮೆಣಿಸಿನ ಕಾಯಿ ಸಸಿ ಒಣಗಿ ಹೋಗಿ ಬೆಳೆ ನಷ್ಟವಾಗಿದೆ. ಬೆಳೆಗೆ ಕ್ರಿಮಿನಾಶಕ ಔಷಧಿ, ರಸಗೊಬ್ಬರ, ಬೀಜ ಬಿತ್ತನೆಗೆ ಅಂತ ತನ್ನ ಪತ್ನಿ ನೀಲಮ್ಮ ಹೆಸರಲ್ಲಿ ಎಸ್. ಬಿ. ಐ ಬ್ಯಾಂಕ್ ನಲ್ಲಿ 1 ಲಕ್ಷದ 20 ಸಾವಿರ ಸಾಲವನ್ನು ತೆಗೆದುಕೊಂಡಿದ್ದಾನೆ. ಅಲ್ಲದೆ ಗ್ರಾಮದಲ್ಲಿ 5 ಲಕ್ಷ ಕೈ ಸಾಲ ಮಾಡಿದ್ದಾನೆ.ಮೆಣಿಸಿನಕಾಯಿ ಬೆಳೆ ಒಣಗಿ ಹೋದ ಹಿನ್ನಲೆ ಮತ್ತೆ ಜೋಳ ಹಾಕಿದ್ದಾನೆ.

ಮಳೆಯಿಲ್ಲದೇ ಮೆಣಿಸಿನಕಾಯಿ ಬೆಳೆ ಬಾರದೆ ನಷ್ಟ ಉಂಟಾಗಿದ್ದರಿಂದ ಸಾಲ ಹೆಚ್ಚಾಗಿ ತೀರಿಸುವುದು ಹೇಗೆ ಅಂತ ಚಿಂತೆಗೆ ಹಿಡಾಗಿ ಮನನೊಂದು ರಾತ್ರಿ ಕ್ರಿಮಿನಾಶಕ ಔಷಧಿ ಸೇವಿಸಿ ಒದ್ದಾಡುತ್ತಿದ್ದು,ಇದನ್ನು ಕಂಡ ಕುಟುಂಬಸ್ಥರು ಬಂದು ನೋಡಿದಾಗ ಬಾಯಲ್ಲಿ ಬಿಳಿ ನೊರೆ ಬರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ವಿಮ್ಸ್ ಆಸ್ಪತ್ರೆ ಕರೆದೋಯ್ಯಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತ ಪಟ್ಟಿದ್ದಾನೆ ಎಂದು ಪತ್ನಿ ನೀಡಿದ ದೂರಿನ ಅನ್ವಯ ಕುರುಗೋಡು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment