Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳೆ ವಿಮೆ ಗಡುವು ವಿಸ್ತರಣೆಗೆ ರೈತ ಸಂಘ ಹಾಗೂ ಹಸಿರುಸೇನೆ ಆಗ್ರಹ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಜುಲೈ. 29 : ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆ ವಿಮೆ ಗಡುವು ವಿಸ್ತರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಾಸುದೇವ ಮೇಟಿ ಬಣದವರು ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಮಳೆ ಬಾರದ ಕಾರಣ ರೈತರು ಬೆಳೆ ವಿಮೆ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆ. ಶೇ.15 ರಿಂದ 20 ರಷ್ಟು ಮಾತ್ರ ಬಿತ್ತನೆಯಾಗಿದ್ದು, ಮೊಳಕೆಯೊಡೆದು ಅರ್ಧ ಅಡಿಯಿಂದ ಒಂದು ಅಡಿ ಎತ್ತರವಾಗಿರುವ ಬೆಳೆಗಳಿಗೆ ಮಾತ್ರ ರೈತರು ವಿಮೆ ಕಟ್ಟಿದ್ದಾರೆ. ಕೆಲವು ಕಡೆ ಬೀಜ ಮೊಳಕೆಯೊಡೆದು ಮೇಲೆ ಬಾರದೆ ಭೂಮಿಯಲ್ಲಿಯೇ ಕಮರಿ ಹೋಗುತ್ತಿದೆ. ಹೀಗಿರುವಾಗ ರೈತರು ಬೆಳೆ ವಿಮೆ ಪಾವತಿಸಲು ಹೇಗೆ ಸಾಧ್ಯ. ಕೃಷಿ ಇಲಾಖೆ ಅಧಿಕಾರಿಗಳು ರೈತರ ಮುಖಂಡರುಗಳ ಸಭೆ ನಡೆಸಿ ಬೆಳೆ ವಿಮೆ ಕಟ್ಟಿ ಬಿತ್ತನೆ ಮಾಡಿದ್ದರೂ ಅಥವಾ ಬಿತ್ತನೆ ಮಾಡದಿದ್ದರೂ ವಾಡಿಕೆಗಿಂತ ಜಾಸ್ತಿ ಮಳೆ ಬಾರದೆ ಇದ್ದರೆ ಬೆಳೆ ವಿಮೆ ಕಂಪನಿಯವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಶೀಲಿಸಿ ಶೇ.25 ರಷ್ಟು ಹಣವನ್ನು ಖಾತೆಗೆ ಜಮಾ ಮಾಡುತ್ತಾರೆಂದು ತಿಳಿಸಿರುವ ಕಾರಣ ರೈತರು ಬೆಳೆ ವಿಮೆ ಪಾವತಿಸಲು ಮುಂದಾಗಿರುವುದರಿಂದ ಆ.20 ರವರೆಗೆ ಬೆಳೆ ವಿಮೆ ಪಾವತಿಗೆ ಗಡುವು ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಈ.ಎನ್.ಲಕ್ಷ್ಮಿಕಾಂತ್ ಲಿಂಗಾವರಹಟ್ಟಿ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲೋಲಾಕ್ಷಮ್ಮ, ಜಿಲ್ಲಾ ಕಾರ್ಯಾಧ್ಯಕ್ಷ ಓಂಕಾರಪ್ಪ ಎಸ್. ಕಾಂತರಾಜ್ ಎಸ್, ಪಿ.ನಾಗರಾಜ್, ಮಂಜುಳ ಕೊಳಹಾಳ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now