Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರು ಬೆಳೆ ಸಮೀಕ್ಷೆ ಮಾಡುವಾಗ ನಿಖರ ಬೆಳೆ ನಮೂದಿಸಿ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

---Advertisement---

ದಾವಣಗೆರೆ. ಮಾ.05: ರೈತರು ಬೆಳೆ ಸಮೀಕ್ಷೆ ಕೈಗೊಂಡಾಗ ತಾವು ಬೆಳೆದಿರುವ ಬೆಳೆ ಹಾಗೂ ವಿಸ್ತೀರ್ಣವನ್ನು ನಿಖರವಾಗಿ ದಾಖಲಿಸಬೇಕು. ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿ ಅಸಗೋಡು ಗ್ರಾಮ ವ್ಯಾಪ್ತಿಯಲ್ಲಿ 545 ಎಕರೆ ಟೊಮೆಟೊಗೆ ವಿಮೆ ಪಾವತಿಸಿದ್ದು ವಾಸ್ತವದಲ್ಲಿ 11.23 ಎಕರೆ ಟೊಮೆಟೊ ಬೆಳೆ ಬೆಳೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

 

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ À ಬಿಳಿಚೋಡು ಹೋಬಳಿಯ ಅಸಗೋಡು ಗ್ರಾಮದಲ್ಲಿ ಟೊಮೆಟೊ ಬೆಳೆಗೆ ರೈತರು ಬೆಳೆ ವಿಮಾ ಕಂತನ್ನು ಪಾವತಿಸಿದ್ದು, ಅಕ್ರಮವಾಗಿ ಬೆಳೆ ಸಮೀಕ್ಷೆ ಆಪ್‍ನಲ್ಲಿ ಟೊಮೆಟೊ ಬೆಳೆಯನ್ನು ಖಾಸಗಿ ನಿವಾಸಿಗಳ ನೆರವಿನಿಂದ ದಾಖಲಿಸಲಾಗಿದೆ. ಸಾಂಪ್ರದಾಯಿಕವಾಗಿ ಬೆಳೆಯಲ್ಪಡುವ ವಿಸ್ತೀರ್ಣಕ್ಕಿಂತಲೂ ಹೆಚ್ಚಿನ ಪ್ರದೇಶದಲ್ಲಿ ಟೊಮೆಟೊ ಬೆಳೆಯು ದಾಖಲಾಗಿದ್ದರಿಂದ, ಜಿಲ್ಲೆಯ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ಭೌತಿಕವಾಗಿ 307 ಪ್ಲಾಟ್ ಗಳನ್ನು ಪುನರ್ ಪರಿಶೀಲಿಸಿದಾಗ ಕೇವಲ 13 ಪ್ಲಾಟುಗಳಲ್ಲಿ ಟೊಮೆಟೊ ಬೆಳೆದಿರುವುದು ಕಂಡು ಬಂದಿದೆ. 545 ಎಕರೆ ಪ್ರದೇಶಕ್ಕೆ ಬೆಳೆ ವಿಮಾ ಕಂತನ್ನು ಪಾವತಿಸಲಾಗಿದ್ದು, ಕೇವಲ 11.23 ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆ ಕಂಡುಬಂದಿರುತ್ತದೆ.

 

ಬೆಳೆ ಸಮೀಕ್ಷೆಯನ್ನು ಮಾಡುವಾಗ ಅಥವಾ ಮಾಡಿಸುವಾಗ ಕಡ್ಡಾಯವಾಗಿ ತಾವು ಬೆಳೆದಿರುವ ಬೆಳೆ ಹಾಗೂ ವಿಸ್ತೀರ್ಣವನ್ನು ಪ್ರಲೋಭನೆಗೆ ಒಳಗಾಗದೇ ತಾವು ನಿಖರವಾಗಿ ಬೆಳೆದ ಬೆಳೆಯನ್ನು ದಾಖಲಿಸಬೇಕು. ಯಾರಾದರೂ ತಪ್ಪು ಮಾಹಿತಿ ನೀಡಲು ಆಮಿಷವೊಡ್ಡಿದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬಹುದೆಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

 

ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿದಂತೆ ರೈತರು ಪಾವತಿಸಿರುವ ಬೆಳೆ ವಿಮಾ ಕಂತು ಹಾಗೂ ಬೆಳೆದಿರುವ ಬೆಳೆ ಮತ್ತು ವಿಸ್ತೀರ್ಣ ಬಹಳ ಮುಖ್ಯವಾಗಿರುತ್ತದೆ. ರೈತರು ತಾವು ಬೆಳೆದಿರುವ ಬೆಳೆಯನ್ನು “ಬೆಳೆ ಸಮೀಕ್ಷೆ” ಆಪ್ ನಲ್ಲಿ ದಾಖಲಿಸಲು  ಅವಕಾಶವಿರುತ್ತದೆ. ರೈತರು ತಾವು ಬೆಳೆದಿರುವ ಬೆಳೆಯನ್ನು ಬೆಳೆ ಸಮೀಕ್ಷೆ ಆಪ್ ನಲ್ಲಿ ದಾಖಲಿಸಲು ಕಷ್ಟವಾದಲ್ಲಿ ಸಂಬಂಧಿಸಿದ ಗ್ರಾಮದಲ್ಲಿನ ಖಾಸಗಿ ನಿವಾಸಿಗಳಿಂದ ಬೆಳೆ ದಾಖಲೀಕರಣವನ್ನು ಕೈಗೊಳ್ಳಲಾಗುತ್ತಿದ್ದು,. ಜಿಲ್ಲಾಡಳಿತದಿಂದ ಈ ಚಟುವಟಿಕೆಯನ್ನು ಅನುμÁ್ಠನಗೊಳಿಸಲಾಗುತ್ತಿದೆ. ಬೆಳೆ ನಷ್ಟ ಹೊಂದಿರುವ ರೈತರಿಗೆ ವಿಮೆ ಪರಿಹಾರ ದೊರಕಿಸಿಕೊಡಲು ನಿಯಮಾನುಸಾರ ಕ್ರಮ ಜರುಗಿಸಲಾಗುತ್ತಿದೆ. ಕಳೆದ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ರೂ.140 ಕೋಟಿಗಳಿಗಿಂತಲೂ ಹೆಚ್ಚು ವಿಮಾ ಪರಿಹಾರವಾಗಿ ನೀಡಿದ್ದು ಹಣ ನೇರವಾಗಿ ರೈತರ ಖಾತೆಗಳಿಗೆ ಜಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...