Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರು ಮಾಡು ಇಲ್ಲವೆ ಮಡಿ ಎನ್ನುವ ನಿರ್ಧಾರಕ್ಕೆ ಬರಬೇಕು : ಟಿ.ನುಲೇನೂರು ಶಂಕರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಕೃಷಿ ಪಂಪ್‍ಸೆಟ್‍ಗಳಿಗೆ ಸ್ಮಾರ್ಟ್ ಮೀಟರ್‍ಗಳನ್ನು ಅಳವಡಿಸುವ ಮಸೂದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಸಂಸತ್‍ನಲ್ಲಿ ಸ್ಥಾಯಿ ಸಮಿತಿ ಮುಂದೆ ಮಂಡಿಸಿರುವುದನ್ನು ಹಿಂದಕ್ಕೆ ಪಡೆಯುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿ.ಸಿ.ಗೆ ಮನವಿ ಸಲ್ಲಿಸಲಾಯಿತು.

ರೈತ ಭವನದಿಂದ ಮೆರವಣಿಗೆ ಮೂಲಕ ಆಗಮಿಸಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಶಂಕರಪ್ಪ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಪರವಾಗಿರುತ್ತದೆ ಎಂದು ನಂಬಿದ್ದೆವು. ರೈತರ ಸಾಲ ಮನ್ನ ಆಗಿಲ್ಲ.

ಹತ್ತು ಲಕ್ಷ ಕೋಟಿ ರೂ.ಸಾರ್ವಜನಿಕರ ಹಣದಲ್ಲಿ ಶ್ರೀಮಂತರ ಸಾಲ ಮನ್ನ ಆಗಿದೆ. ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಸ್ಮಾರ್ಟ್ ಮೀಟರ್‍ಗಳನ್ನು ಅಳವಡಿಸಲು ಕೇಂದ್ರ ಸರ್ಕಾರ ಸಂಸತ್‍ನಲ್ಲಿ ಸ್ಥಾಯಿ ಸಮಿತಿ ಮುಂದೆ ಮಂಡಿಸಿದ್ದು, ಚಳಿಗಾಲದ ಅಧಿವೇಶನದೊಳಗೆ ಕಾಯಿದೆ ಜಾರಿಗೆ ಬರಲಿದೆ. ರೈತರು ಇನ್ನಾದರೂ ಎಚ್ಚೆತ್ತುಕೊಂಡು ಹೋರಾಟಕ್ಕೆ ಇಳಿಯದಿದ್ದರೆ ಬದುಕು ದಿವಾಳಿಯಾಗುವುದರಲ್ಲಿ ಅನುಮಾನವಿಲ್ಲ. ಮಾಡು ಇಲ್ಲವೆ ಮಡಿ ಎನ್ನುವ ನಿರ್ಧಾರಕ್ಕೆ ಬರಬೇಕೆಂದು ರೈತರನ್ನು ಜಾಗೃತಿಗೊಳಿಸಿದರು.

ಹವಾಮಾನ ವೈಪರೀತ್ಯದಿಂದಾಗಿ ರಾಜ್ಯಾದ್ಯಂತ ಬೆಳೆ ನಷ್ಟವಾಗಿದ್ದು, ಅವೈಜ್ಞಾನಿಕ ಪರಿಹಾರ ನೀಡುವುದನ್ನು ಕೈಬಿಟ್ಟು ವಾಸ್ತವ ವೆಚ್ಚ ಆಧರಿಸಿದ ಬೆಳೆ ನಷ್ಟ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು ಮಾತನಾಡುತ್ತ ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಸ್ಮಾರ್ಟ್ ಮೀಟರ್‍ಗಳನ್ನು ಅಳವಡಿಸಿದರೆ ರೈತರು ಉಳಿಯಲು ಸಾಧ್ಯವಾ ಎನ್ನುವುದನ್ನು ಗಂಭೀರವಾಗಿ ಚಿಂತಿಸಬೇಕಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಎಂ.ಎಸ್.ಪಿ.ಯನ್ನು ಕಾನೂನುಬದ್ದಗೊಳಿಸಿ ರೈತರು ಬೆಳೆಯುವ ಎಲ್ಲಾ ಬಗೆಯ ಕೃಷಿ ಉತ್ಪನ್ನಗಳನ್ನು ವರ್ಷಪೂರ್ತಿ ಎಂ.ಎಸ್.ಪಿ.ದರದಲ್ಲಿ ಖರೀಧಿಸಲು ಖರೀಧಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.

ಯಾವುದೇ ಕನಿಷ್ಠ ಆಮದು ಶುಲ್ಕವಿಲ್ಲದೆ ಭೂತಾನ್‍ನಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಅಡಿಕೆ ಬೆಳೆಗಾರರು ಕಂಗಾಲಾಗುವ ಪರಿಸ್ಥಿತಿ ಬಂದೊದಗಿದೆ. ಕೂಡಲೆ ಅಡಿಕೆ ಆಮದನ್ನು ನಿಲ್ಲಿಸಬೇಕು. ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ನೊಂದಣಿಯಾಗಿರುವ ಎಲ್ಲಾ ಪ್ರಕರಣಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿ ಸಕ್ರಮಗೊಳಿಸಬೇಕು.
ಮುಂಗಾರು ಮಳೆ ಈ ಸಾಲಿನಲ್ಲಿ ಅಧಿಕವಾಗಿರುವುದರಿಂದ ಈರುಳ್ಳಿ, ಮೆಕ್ಕೆಜೋಳ, ತರಕಾರಿ, ಹೂವು ಬೆಳೆಗಳು ನಾಶವಾಗಿದ್ದು, ರೈತರ ಖಾತೆಗೆ ಕೂಡಲೆ ಪರಿಹಾರದ ಹಣ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ.ಬಿ.ತಿಪ್ಪೇಸ್ವಾಮಿ, ಹಂಪಯ್ಯನಮಾಳಿಗೆ ಧನಂಜಯ, ನಾಗರಾಜ್ ಮುದ್ದಾಪುರ ಇವರುಗಳು ಮಾತನಾಡಿದರು.
ಜಿಲ್ಲಾ ಕಾರ್ಯಾಧ್ಯಕ್ಷ ಪ್ರಭು ಇಸಾಮುದ್ರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿದ್ದೇಶ್ ಯಾದವ್, ಪ್ರವೀಣ್, ಟಿ.ಎಲ್.ಎನ್.ಸ್ವಾಮಿ, ರವಿ ಕೋಗುಂಡೆ,
ರೈತ ಮಹಿಳೆಯರಾದ ಸುಧಮ್ಮ, ಸಿದ್ದಮ್ಮ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

error: Content is protected !!